ದರ್ಶನ್ ಪ್ರಕರಣ: ಸ್ಥಳ ಮಹಜರಿನಲ್ಲಿ ಕಿಡ್ನ್ಯಾಪ್​ ವಿಚಾರ ಬಿಚ್ಚಿಟ್ಟ ರಘು

Updated on: Jun 14, 2024 | 8:38 AM

ಜೂನ್ 13ರ ತಡರಾತ್ರಿ ಚಿತ್ರದುರ್ಗದಲ್ಲಿ ಆರೋಪಿ ರಘು ಅವರನ್ನು ಕರೆತಂದು ಮಹಜರು ಮಾಡಲಾಗಿದೆ. ಚಳ್ಳಕೆರೆ ಗೇಟ್ ಬಳಿ ರೇಣುಕಾ ಸ್ವಾಮಿ ಬೈಕ್ ನಿಲ್ಲಿಸಿದ್ದರು. ಆ ಬಳಿಕ ಅವರ ಕಿಡ್ನ್ಯಾಪ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸ್ಥಳಮಹಜರು ಮಾಡಲಾಗಿದೆ.

ನಟ ದರ್ಶನ್ ಹಾಗೂ ಗ್ಯಾಂಗ್​ನಿಂದ ರೇಣುಕಾ ಸ್ವಾಮಿ (Renukaswami) ಕೊಲೆ ಮಾಡಿದ ಪ್ರಕರಣ ಸಾಕಷ್ಟು ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಪ್ರಕರಣದಲ್ಲಿ ಪೊಲೀಸರಿಗೆ ಬಲವಾದ ಸಾಕ್ಷಿಗಳು ಸಿಗುತ್ತಿವೆ. ಈಗ ಜೂನ್ 13ರ ತಡರಾತ್ರಿ ಚಿತ್ರದುರ್ಗದಲ್ಲಿ ಆರೋಪಿ ರಘು ಅವರನ್ನು ಕರೆತಂದು ಮಹಜರು ಮಾಡಲಾಗಿದೆ. ಚಳ್ಳಕೆರೆ ಗೇಟ್ ಬಳಿ ರೇಣುಕಾ ಸ್ವಾಮಿ ಬೈಕ್ ನಿಲ್ಲಿಸಿದ್ದರು. ಆ ಬಳಿಕ ಅವರ ಕಿಡ್ನ್ಯಾಪ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸ್ಥಳಮಹಜರು ಮಾಡಲಾಗಿದೆ. ಎಲ್ಲಿ ಅವರನ್ನು ಕಿಡ್ನ್ಯಾಪ್ ಮಾಡಲಾಯಿತು, ಹೇಗೆ ಕರೆದುಕೊಂಡು ಹೋಗಲಾಯಿತು ಎನ್ನುವುದನ್ನು ರಘು ಅವರು ವಿವರಿಸಿದ್ದಾರೆ. ಸ್ಥಳಮಹಜರಿನ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jun 14, 2024 08:24 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More