ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ

Updated on: Jul 10, 2025 | 1:04 PM

ರೇಣುಕಾ ಸ್ವಾಮಿ ಕೊಲೆ ಕೇಸ್ ವಿಷಯವಾಗಿ ದರ್ಶನ್ ಅವರು ಕೋರ್ಟ್ ಎದುರು ಹಾಜರಿ ಹಾಕಿದ್ದಾರೆ ಮತ್ತು ವಿಚಾರಣೆ ಎದುರುಸಿದ್ದಾರೆ. ಈ ವೇಳೆ ವಿಚಾರಣೆಯನ್ನು ಮುಂದಕ್ಕೆ ಹಾಕಲಾಯಿತು. ಆಗ ದರ್ಶನ್ ಅಭಿಮಾನಿಗಳು ಜೈಕಾರ ಕೂಗಿದರು. ಸದ್ಯ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದಕ್ಕೆ ಹಾಕಲಾಗಿದೆ.

ನಟ ದರ್ಶನ್ (Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ ವಿಚಾರವಾಗಿ ಕೋರ್ಟ್​ಗೆ ಹಾಜರಿ ಹಾಕಿದರು.  ಪವಿತ್ರಾ ಗೌಡ  ನ್ಯಾಯಾಲಯಕ್ಕೆ ಹಾಜಾರಿ ಹಾಕಿಲ್ಲ. ದರ್ಶನ್ ಹಾಗೂ ಉಳಿದ ಆರೋಪಿಗಳ ಹಾಜರಾತಿಯನ್ನು ನ್ಯಾಯಾಲ ಪಡೆಯಿತು. ಸದ್ಯ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದೆ. ಈ ವೇಳೆ ಎಲ್ಲರೂ ಹಾಜರು ಇರುವಂತೆ ಕೋರ್ಟ್ ಸೂಚಿಸಿದೆ. ಆ ಬಳಿಕ ಕೋರ್ಟ್​ನಿಂದ ದರ್ಶನ್ ಹೊರ ನಡೆದಿದ್ದಾರೆ. ಈ ವೇಳೆ ‘ಡಿ ಬಾಸ್​ಗೆ ಜೈ’ ಎಂದು ಫ್ಯಾನ್ಸ್ ಕೂಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 10, 2025 01:01 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More