ದರ್ಶನ್​ಗೆ ಜೈಲಿನಿಂದ ಮುಕ್ತಿ ಸಿಗಲೆಂದು ಪ್ರಾರ್ಥಿಸಿದ ಅಭಿಮಾನಿಗಳು

Updated on: Jul 14, 2024 | 4:29 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದಿಂದ ಜೈಲು ಸೇರಿರುವ ದರ್ಶನ್ ತೂಗುದೀಪ ಅವರ ಪರವಾಗಿ ಅವರ ಅಭಿಮಾನಿಗಳು ದೇವಾಲಯದಲ್ಲಿ ಅವರ ಹೆಸರಲ್ಲಿ ವಿಶೇಷ ಪೂಜೆ ಮಾಡಿಸಿ, ತಮ್ಮ ಮೆಚ್ಚಿನ ನಟ ಬೇಗ ಬಿಡುಗಡೆ ಆಗಬೇಕೆಂದು ಪ್ರಾರ್ಥಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಒಂದು ತಿಂಗಳಿಗೂ ಹೆಚ್ಚು ಸಮಯ ಆಗಿದೆ. ದರ್ಶನ್ ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಕಾಲ ಕಳೆಯುತ್ತಿದ್ದಾರೆ. ಹೊರಗೆ ಅಭಿಮಾನಿಗಳು ತಮ್ಮ ಮೆಚ್ಚಿನ ನಟ ಬೇಗನೆ ಜೈಲಿನಿಂದ ಬಿಡುಗಡೆ ಆಗಿ ಬರಲಿ, ದರ್ಶನ್​ಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಆಗದಿರಲಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಇಂದು (ಜುಲೈ 14) ದರ್ಶನ್​ರ ಕೆಲವು ಅಭಿಮಾನಿಗಳು ದರ್ಶನ್​ರ ಹೊಸ ಸಿನಿಮಾ ‘ಡೆವಿಲ್​’ ಪೋಸ್ಟರ್​ಗಳನ್ನು ಹಿಡಿದುಕೊಂಡು ದೇವರ ಮುಂದೆ ನಿಂತು ತಮ್ಮ ಮೆಚ್ಚಿನ ನಟ ಬೇಗನೆ ಬಿಡುಗಡೆ ಆಗಬೇಕು ಎಂದು ಬೇಡಿಕೊಂಡರು. ದರ್ಶನ್ ಹೆಸರಲ್ಲಿ ವಿಶೇಷ ಪೂಜೆಯನ್ನು ಸಹ ದರ್ಶನ್​ರ ಅಭಿಮಾನಿಗಳು ಮಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 14, 2024 04:22 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More