ದರ್ಶನ್ ಫೋಟೋ ಹಿಡಿದು ಪೊಲೀಸ್​ ಠಾಣೆ ಎದುರು ಕಾದು ಕುಳಿತ ಅಭಿಮಾನಿ; ಫ್ಯಾನ್ಸ್​ಗೆ ಬುದ್ಧಿ ಹೇಳೋದ್ಯಾರು?

Updated on: Jun 12, 2024 | 9:03 AM

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ

ಕೊಲೆ ಕೇಸ್​ನಲ್ಲಿ ನಟ ದರ್ಶನ್ (Darshan) ಅವರು ಜೈಲು ಸೇರಿದ್ದಾರೆ. ಪೊಲೀಸ್ ಠಾಣೆಯ ಎದುರು ಫ್ಯಾನ್ಸ್ ನೆರೆಯುತ್ತಿದ್ದಾರೆ. ‘ಜೈ ಡಿಬಾಸ್’ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ಇಳಕಲ್​ನಿಂದ ದರ್ಶನ್ ಫೋಟೋ ಹಿಡಿದು ಅಭಿಮಾನಿ ಆಗಮಿಸಿದ್ದಾನೆ. ದರ್ಶನ್​ಗಾಗಿ ಈತ ಕಾದು ಕೂತಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಬೆಂಬಲ ಸೂಚಿಸಿದ್ದಾರೆ. ಇದನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಅಭಿಮಾನಿಗಳಿಗೆ ಬುದ್ಧಿ ಹೇಳುವ ಕೆಲಸ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ದರ್ಶನ್ ಒಳ ಹೋಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More