ದರ್ಶನ್ ಫೋಟೋ ಹಿಡಿದು ಪೊಲೀಸ್​ ಠಾಣೆ ಎದುರು ಕಾದು ಕುಳಿತ ಅಭಿಮಾನಿ; ಫ್ಯಾನ್ಸ್​ಗೆ ಬುದ್ಧಿ ಹೇಳೋದ್ಯಾರು?

|

Updated on: Jun 12, 2024 | 9:03 AM

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ

ಕೊಲೆ ಕೇಸ್​ನಲ್ಲಿ ನಟ ದರ್ಶನ್ (Darshan) ಅವರು ಜೈಲು ಸೇರಿದ್ದಾರೆ. ಪೊಲೀಸ್ ಠಾಣೆಯ ಎದುರು ಫ್ಯಾನ್ಸ್ ನೆರೆಯುತ್ತಿದ್ದಾರೆ. ‘ಜೈ ಡಿಬಾಸ್’ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ಇಳಕಲ್​ನಿಂದ ದರ್ಶನ್ ಫೋಟೋ ಹಿಡಿದು ಅಭಿಮಾನಿ ಆಗಮಿಸಿದ್ದಾನೆ. ದರ್ಶನ್​ಗಾಗಿ ಈತ ಕಾದು ಕೂತಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಬೆಂಬಲ ಸೂಚಿಸಿದ್ದಾರೆ. ಇದನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಅಭಿಮಾನಿಗಳಿಗೆ ಬುದ್ಧಿ ಹೇಳುವ ಕೆಲಸ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ದರ್ಶನ್ ಒಳ ಹೋಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on