AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ದಿನ ಹೊಸ ಹೀರೋಗಳಿಗೆ ಕಿವಿಮಾತು ಹೇಳಿದ ನಟ ದರ್ಶನ್ಬರ್ತ್​ಡೇ ದಿನ ಹೊಸ ಹೀರೋಗಳಿಗೆ ಕಿವಿಮಾತು ಹೇಳಿದ ನಟ ದರ್ಶನ್

ಬರ್ತ್​ಡೇ ದಿನ ಹೊಸ ಹೀರೋಗಳಿಗೆ ಕಿವಿಮಾತು ಹೇಳಿದ ನಟ ದರ್ಶನ್

ರಾಜೇಶ್ ದುಗ್ಗುಮನೆ
|

Updated on: Feb 16, 2024 | 2:18 PM

Share

ನಟ ದರ್ಶನ್ ಅವರು ಚಿತ್ರರಂಗಕ್ಕೆ ಬಂದ 25 ವರ್ಷಗಳು ಕಳೆದಿವೆ. ಅವರಿಗೆ ಸಾಕಷ್ಟು ಅನುಭವ ಇದೆ. ಹೊಸ ಸಿನಿಮಾಗಳು ಜನರಿಗೆ ತಲುಪುತ್ತಿಲ್ಲ ಎನ್ನುವ ಮಾತು ಚಾಲ್ತಿಯಲ್ಲಿದೆ. ಹಾಗೇಕೆ ಎನ್ನುವ ಪ್ರಶ್ನೆಗೆ ದರ್ಶನ್ ಕಡೆಯಿಂದ ಉತ್ತರ ಸಿಕ್ಕಿದೆ. ಅವರಿಗೆ ಕಿವಿಮಾತು ಸಿಕ್ಕಿದೆ.

ದರ್ಶನ್ (Darshan) ಅವರಿಗೆ ಇಂದು (ಫೆಬ್ರವರಿ 16) ಬರ್ತ್​ಡೇ ಸಂಭ್ರಮ. ಅವರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ದರ್ಶನ್ ಚಿತ್ರರಂಗಕ್ಕೆ ಕಾಲಿಟ್ಟು ಎರಡೂವರೆ ದಶಕ ಕಳೆದಿದೆ. ಅವರಿಗೆ ಬಣ್ಣದ ಲೋಕದಲ್ಲಿ ಸಾಕಷ್ಟು ಅನುಭವ ಇದೆ. ಅವರು ಅನೇಕರಿಗೆ ಮಾದರಿ. ಹೊಸಬರಿಗೆ ದರ್ಶನ್ ಅವರು ಕಿವಿಮಾತು ಹೇಳಿದ್ದಾರೆ. ಹೊಸ ಸಿನಿಮಾಗಳು ಜನರಿಗೆ ತಲುಪುತ್ತಿಲ್ಲ ಎನ್ನುವ ಮಾತಿದೆ. ಹಾಗೇಕೆ ಎನ್ನುವ ಪ್ರಶ್ನೆಗೆ ದರ್ಶನ್ ಕಡೆಯಿಂದ ಉತ್ತರ ಸಿಕ್ಕಿದೆ. ‘ಹೊಸ ಹೀರೋಗಳು ಬೀದಿಗೆ ಇಳಿಯಬೇಕು. ನಾವೇ ಎಷ್ಟು ಇಳಿತೀವಿ ನೋಡ್ತೀರಲ್ಲ. ಒಳಗೆ ಕೂತ್ರೆ ಯಾರೂ ಬರಲ್ಲ’ ಎಂದಿದ್ದಾರೆ. ಈ ಮೂಲಕ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಬೇಕು ಎಂದು ಒತ್ತಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More