ಜೈಲಲ್ಲಿ ಮಗನ ತಬ್ಬಿ ಹಗುರಾದ ದರ್ಶನ್; ಪತ್ನಿ ವಿಜಯಲಕ್ಷ್ಮೀ ಭಾವುಕ

Updated on: Jul 30, 2024 | 8:14 AM

ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಅಲ್ಲದೆ ನವ ಚಂಡಿಕಾ ಹೋಮವನ್ನು ಕೂಡ ಮಾಡಿಸಲಾಗಿತ್ತು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮೀ.

ಜೈಲಿನಲ್ಲಿರೋ ದರ್ಶನ್​ಗೆ ಅಲ್ಲಿನ ಜೀವನ ಸಾಕಾಗಿ ಹೋಗಿದೆ. ಜೈಲಿನ ಊಟ ಸೇರುತ್ತಿಲ್ಲ. ಬ್ಯಾಂಕ್ ಬ್ಯಾಲೆನ್ಸ್ ಕೋಟಿ ಕೋಟಿ ಇದ್ದರೂ ಅದು ಪ್ರಯೋಜನಕ್ಕೆ ಬರುತ್ತಿಲ್ಲ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಯಾಕಾದರೂ ಸಿಲುಕಿಕೊಂಡೆನೋ ಎನ್ನುವ ಪಶ್ಚಾತಾಪ ಅವರನ್ನು ಬಹುವಾಗಿ ಕಾಡುತ್ತಿದೆ. ಈ ಮಧ್ಯೆ ದರ್ಶನ್​ನ ಭೇಟಿ ಮಾಡಲು ಅವರ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಹಾಗೂ ಸಹೋದರ ದಿನಕರ್ ಜೈಲಿಗೆ ತೆರಳಿದ್ದರು. ಈ ವೇಳೆ ಮಗನ ತಬ್ಬಿ ದರ್ಶನ್ ಹಗುರಾಗಿದ್ದಾರೆ. ಇದೇ ವೇಳೆ ದರ್ಶನ್​ಗೆ ಪ್ರಸಾದ ನೀಡಿದ್ದಾರೆ ವಿಜಯಲಕ್ಷ್ಮೀ. ಇತ್ತೀಚೆಗೆ ವಿಜಯಲಕ್ಷ್ಮೀ ಅವರು ಕೊಲ್ಲೂರಿನ ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾ ಹೋಮ ಮಾಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 30, 2024 08:13 AM
Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More