ದರ್ಶನ್ ಹುಟ್ಟುಹಬ್ಬದಂದು ಅವರಿಗೆ ದೃಷ್ಟಿ ತೆಗೆದ ಮಹಿಳೆಯರ ಮಾತು

ದರ್ಶನ್ ಹುಟ್ಟುಹಬ್ಬದಂದು ಅವರಿಗೆ ದೃಷ್ಟಿ ತೆಗೆದ ಮಹಿಳೆಯರ ಮಾತು

Updated on: Feb 16, 2024 | 10:31 PM

Darshan Birthday: ಕೆಲವು ಮಹಿಳಾ ಅಭಿಮಾನಿಗಳು ಒಟ್ಟಿಗೆ ಬಂದು ದರ್ಶನ್ ಅವರಿಗೆ ದೃಷ್ಟಿ ತೆಗೆದಿದ್ದು ವಿಶೇಷವಾಗಿ ಕಾಣಿಸಿತು. ದೃಷ್ಟಿ ತೆಗೆದ ಮಹಿಳೆಯರು ದರ್ಶನ್ ಬಗ್ಗೆ ಹೇಳಿದ್ದು ಹೀಗೆ...

ದರ್ಶನ್ ತೂಗುದೀಪ (Darshan Thoogudeepa) ಅವರು ಇಂದು ಅಭಿಮಾನಿಗಳೊಟ್ಟಿಗೆ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ರಾಜ್ಯದ ಮೂಲೆ-ಮೂಲೆಗಳಿಂದ ಅಭಿಮಾನಿಗಳು ಆಗಮಿಸಿ ತಮ್ಮ ಮೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ದರ್ಶನ್​ರ ಮನವಿಯಂತೆ ಹಲವು ಅಭಿಮಾನಿಗಳು ದವಸ-ಧಾನ್ಯಗಳನ್ನು ತಂದು ದರ್ಶನ್​ರಿಗೆ ಅರ್ಪಿಸಿದ್ದಾರೆ. ರೈತ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮಂದಿಯೂ ಸಹ ಆಗಮಿಸಿ ದರ್ಶನ್ ಅವರಿಗೆ ಇಂದು ಶುಭ ಹಾರೈಸಿದರು. ಇದರ ನಡುವೆ ಕೆಲವು ಮಹಿಳಾ ಅಭಿಮಾನಿಗಳು ಒಟ್ಟಿಗೆ ಬಂದು ದರ್ಶನ್ ಅವರಿಗೆ ದೃಷ್ಟಿ ತೆಗೆದಿದ್ದು ವಿಶೇಷವಾಗಿ ಕಾಣಿಸಿತು. ಹಲವಾರು ಮಂದಿ ಮಹಿಳೆಯರು ಒಟ್ಟಿಗೆ ದರ್ಶನ್​ರಿಗೆ ದೃಷ್ಟಿ ತೆಗೆದರು. ಆ ಮಹಿಳೆಯರ ತಂಡ ಟಿವಿ9 ಜೊತೆ ಮಾತನಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More