AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾಗೋಸ್ಕರ ಕೈ ಸರ್ಜರಿ ಮುಂದೂಡಿಕೊಂಡ ದರ್ಶನ್

ಸುಮಲತಾಗೋಸ್ಕರ ಕೈ ಸರ್ಜರಿ ಮುಂದೂಡಿಕೊಂಡ ದರ್ಶನ್

ರಾಜೇಶ್ ದುಗ್ಗುಮನೆ
|

Updated on: Apr 03, 2024 | 1:11 PM

Share

‘ನಾನು ಈಗಾಗಲೇ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಆದರೆ, ಅಮ್ಮನಿಗೆ ಡೇಟ್ಸ್ ಕೊಟ್ಟಿದ್ದೇನೆ. ಅದನ್ನು ಮುಗಿಸಿ ಬರ್ತೀನಿ. ರಾತ್ರಿ ವೇಳೆಗೆ ಆಸ್ಪತ್ರೆಗೆ ಅಡ್ಮಿಟ್ ಆಗ್ತೀನಿ. ನಾಳೆ ಆಪರೇಷನ್ ಮಾಡಿಸಿಕೊಳ್ಳುತ್ತೇನೆ’ ಎಂದರು ದರ್ಶನ್.

ಇತ್ತೀಚೆಗೆ ‘ಡೆವಿಲ್’ ಸಿನಿಮಾ ಶೂಟಿಂಗ್ ವೇಳೆ ನಟ ದರ್ಶನ್ (Darshan) ಅವರು ಕೈಗೆ ಪೆಟ್ಟಾಗಿದೆ. ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಈಗಾಗಲೇ ಅವರು ಸರ್ಜರಿ ಮಾಡಿಸಿಕೊಳ್ಳಬೇಕಿತ್ತು. ಆದರೆ, ಅವರು ಅದನ್ನು ಮುಂದೂಡಿಕೊಂಡಿದ್ದಾರೆ. ಸುಮಲತಾ ಅಂಬರೀಷ್ ಅವರು ತಮ್ಮ ರಾಜಕೀಯ ನಿಲುವನ್ನು ತಿಳಿಸಲು ಮಂಡ್ಯದಲ್ಲಿ ಸಾರ್ವಜನಿಕ ಸಭೆ ಕರೆದಿದ್ದಾರೆ. ಸುಮಲತಾ ಜೊತೆ ದರ್ಶನ್​, ಅಭಿಷೇಕ್ ಅಂಬರೀಷ್ ಕೂಡ ಇದ್ದರು. ದರ್ಶನ್ ಅವರು ವೇದಿಕೆ ಏರಿ ಮಾತನಾಡಿದ್ದಾರೆ. ‘ನಾನು ಈಗಾಗಲೇ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಆದರೆ, ಅಮ್ಮನಿಗೆ ಡೇಟ್ಸ್ ಕೊಟ್ಟಿದ್ದೇನೆ. ಅದನ್ನು ಮುಗಿಸಿ ಬರ್ತೀನಿ. ರಾತ್ರಿ ವೇಳೆಗೆ ಆಸ್ಪತ್ರೆಗೆ ಅಡ್ಮಿಟ್ ಆಗ್ತೀನಿ. ನಾಳೆ ಆಪರೇಷನ್ ಮಾಡಿಸಿಕೊಳ್ಳುತ್ತೇನೆ’ ಎಂದರು ದರ್ಶನ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ