ದರ್ಶನ್​ ತೂಗುದೀಪ: ಬಳ್ಳಾರಿ ಜೈಲಿಗೆ ಕೊಲೆ ಆರೋಪಿ ದಾಸನ ಎಂಟ್ರಿ ಹೇಗಿತ್ತು ನೋಡಿ

Updated on: Aug 29, 2024 | 10:10 AM

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಕೇಸ್​ಗೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತಿದೆ. ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಪೊಲೀಸರು ಕರೆದೊಯ್ದಿದ್ದಾರೆ.

ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎಂಟ್ರಿ ಆಗಿದ್ದಾರೆ. ಮುಂಜಾನೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಜೈಲು ತಲುಪಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More