ದರ್ಶನ್​ ತೂಗುದೀಪ: ಬಳ್ಳಾರಿ ಜೈಲಿಗೆ ಕೊಲೆ ಆರೋಪಿ ದಾಸನ ಎಂಟ್ರಿ ಹೇಗಿತ್ತು ನೋಡಿ

|

Updated on: Aug 29, 2024 | 10:10 AM

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಕೇಸ್​ಗೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತಿದೆ. ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಪೊಲೀಸರು ಕರೆದೊಯ್ದಿದ್ದಾರೆ.

ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎಂಟ್ರಿ ಆಗಿದ್ದಾರೆ. ಮುಂಜಾನೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಜೈಲು ತಲುಪಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on