ದರ್ಶನ್​ ತೂಗುದೀಪ: ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲ್​ಗೆ ಹೇಗೆ ಶಿಫ್ಟ್ ಮಾಡಲಾಗುತ್ತಿದೆ?

| Updated By: Digi Tech Desk

Updated on: Aug 29, 2024 | 9:58 AM

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಕೇಸ್​ಗೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತಿದೆ. ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಪೊಲೀಸರು ಕರೆದೊಯ್ದಿದ್ದಾರೆ.

ನಟ ದರ್ಶನ್ ಅವರು ಇಂದು (ಆಗಸ್ಟ್​ 29) ಮುಂಜಾನೆಯೇ ಬೆಂಗಳೂರಿನಿಂದ ಬಳ್ಳಾರಿಗೆ ಶಿಫ್ಟ್ ಆಗುತ್ತಿದ್ದಾರೆ. ಮುಂಜಾನೆ 4:30ರ ಸುಮಾರಿಗೆ ಅವರನ್ನು ಪರಪ್ಪನ ಅಗ್ರಹಾರದಿಂದ ಕರೆದುಕೊಂಡು ಹೋಗಲಾಗಿದೆ. ಅವರು ಬಳ್ಳಾರಿ ತಲುಪೋದು 10 ಗಂಟೆ ಆಗಬಹುದು ಎನ್ನಲಾಗುತ್ತಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಕಾರಿನ ಒಳಗೆ ಕರ್ಟನ್ ಹಾಕಲಾಗಿದೆ. ಈ ದೃಶ್ಯವನ್ನು ಟಿವಿ9 ಕನ್ನಡ ಸೆರೆ ಹಿಡಿದಿದೆ. ಜೈಲಿನ ನಿಯಮ ಉಲ್ಲಂಘನೆ ಮಾಡಿದ ಆರೋಪ ದರ್ಶನ್​ ಮೇಲೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Thu, 29 August 24

Follow us on