ಕಟ್ಟುನಿಟ್ಟಿನ ಮನುಷ್ಯ ದರ್ಶನ್ ದುಡ್ಡಿನ ವಿಷಯದಲ್ಲಿ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು, ನಿರ್ಮಾಪಕ

ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು, ತನಗೆ ಇಷ್ಟು ಸಂಭಾವನೆ ಬೇಕು ಅಂತ ಹೇಳುತ್ತಿದ್ದರು, ಕೊಡಲು ಸಾಧ್ಯವಾಗುವ ಹಾಗಿದ್ದರೆ ಮುಂದುವರಿಯೋಣ, ಇಲ್ಲದಿದ್ದರೂ ವಿಶ್ವಾಸ ಮುಂದುವರಿಸಿಕೊಂಡು ಹೋಗೋಣ ಅನ್ನುತ್ತಿದ್ದರು ಎಂದು ಕೆ ಮಂಜು ಹೇಳುತ್ತಾರೆ. ಅವರ ನಿರ್ಮಾಣದ ‘ಲಂಕೇಶ್ ಪತ್ರಿಕೆ’ ಸಿನಿಮಾದಲ್ಲಿ ದರ್ಶನ್ ನಟಿಸಿದ್ದರು.

ಕಟ್ಟುನಿಟ್ಟಿನ ಮನುಷ್ಯ ದರ್ಶನ್ ದುಡ್ಡಿನ ವಿಷಯದಲ್ಲಿ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು, ನಿರ್ಮಾಪಕ
|

Updated on: Jul 03, 2024 | 1:31 PM

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ನಿರ್ಮಾಪಕ ಕೆ ಮಂಜು ದೊಡ್ಡ ಹೆಸರು ಮತ್ತು ಹಲವಾರು ಅದ್ದೂರಿ ಮತ್ತು ಯಶಸ್ವೀ ಚಿತ್ರಗಳನ್ನು ಅವರು ಕನ್ನಡಿಗರಿಗೆ ನೀಡಿದ್ದಾರೆ. ತಮ್ಮ ಕಚೇರಿಯಲ್ಲಿಂದು ಟಿವಿ9 ಸಿನಿಮಾ ವರದಿಗಾರನೊಂದಿಗೆ ಮಾತಾಡಿದ ಅವರು, ಕನ್ನಡ ಚಿತ್ರೋದ್ಯಮ ಮಾತ್ರವಲ್ಲ ಭಾರತೀಯ ಚಿತ್ರರಂಗವೇ ಈಗ ಸಂಕಷ್ಟದಲ್ಲಿದೆ ಎಂದು ಹೇಳಿದರು. ಡಿಜಿಟಲ್, ಸ್ಯಾಟೆಲೈಟ್ ಮತ್ತು ಒಟಿಟಿಗಳ ಹಾವಳಿಯಿಂದಾಗಿ ಥೇಟರ್ ಗಳ ಸಂಖ್ಯೆ ದಿನೇದಿನೇ ಕಡಿಮೆಯಾಗುತ್ತಿದೆ, ಜನ ಮಲ್ಟಿಪ್ಲೆಕ್ಸ್ ಗಳ ಮುಖ ಮಾಡುತ್ತಿದ್ದಾರೆ, ಕೇವಲ ಸ್ಟಾರ್​ಗಳ ಸಿನಿಮಾ ಮಾತ್ರ ಓಡುತ್ತವೆ, ಚಿತ್ರ ನಿರ್ಮಾಣ ಬಹಳ ತೊಂದರೆಯಾಗುತ್ತಿದೆ ಎಂದು ಮಂಜು ಹೇಳಿದರು. ಚಿತ್ರರಂಗದಲ್ಲಿ ನಿರ್ಮಾಪಕರು ಉಳಿಯಬೇಕಾದರೆ ಒಂದು ಬದಲಾವಣೆ ಬರಬೇಕಿದೆ, ಅದು ಯಾವಾಗ ಮತ್ತು ಎಲ್ಲಿಂದ ಬರುತ್ತೋ ಎಂದು ಅವರು ಹೇಳುತ್ತಾರೆ. ಈಗ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿರುವ ದರ್ಶನ್ ಗೆ ಬ್ರೇಕ್ ನೀಡಿದ ಮತ್ತು ಅವರನ್ನು ಸ್ಟಾರ್ ಆಗಿ ಬೆಳೆಸಿದ ಹಲವು ಚಿತ್ರ ನಿರ್ಮಾಪಕರಲ್ಲಿ ಮಂಜು ಕೂಡ ಒಬ್ಬರು. ಸೆಟ್ ಗಳಲ್ಲಿ ದರ್ಶನ್ ನೀಟ್, ಕ್ಲೀನ್ ಮತ್ತು ಕಟ್ಟುನಿಟ್ಟಾಗಿರುತ್ತಿದ್ದರು, ಮತ್ತು ತಾನಾಡಿದ ಮಾತಿಗೆ ಬದ್ಧರಾಗಿರುತ್ತಿದ್ದರು ಎಂದು ಮಂಜು ಹೇಳುತ್ತಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜೈಲಿನಲ್ಲಿರೋ ದರ್ಶನ್​ಗೆ ಒಂದು ನ್ಯಾಯ ಇತರ ಬಂಧಿಗಳಿಗೊಂದು ನ್ಯಾಯ?

Follow us
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್