AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ನೋಡಲು ಜೈಲಿಗೆ ಬಂದು, ಮಾಧ್ಯಮದ ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ

ದರ್ಶನ್ ನೋಡಲು ಜೈಲಿಗೆ ಬಂದು, ಮಾಧ್ಯಮದ ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ

ರಾಮು, ಆನೇಕಲ್​
| Edited By: |

Updated on: Jun 24, 2024 | 1:05 PM

Share

ನ್ಯಾಯಾಂಗ ಬಂಧನದಲ್ಲಿ ಇರುವ ನಟ ದರ್ಶನ್​ ಅವರನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಆಪ್ತರು ಬರುತ್ತಿದ್ದಾರೆ. ಇಂದು (ಜೂನ್​ 23) ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಜೈಲಿನ ಬಳಿ ಬಂದಿದ್ದರು. ಆದರೆ ಮಾಧ್ಯಮಗಳ ಕ್ಯಾಮೆರಾ ಕಂಡ ತಕ್ಷಣ ಅವರು ವಾಪಸ್​ ಹೋಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ದರ್ಶನ್​ ಅವರಿಗೆ ಸಂಕಷ್ಟ ಹೆಚ್ಚಾಗಿದೆ.

ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್​ (Darshan) ಅವರನ್ನು ನೋಡಲು ಆಪ್ತರು ಮತ್ತು ಕುಟುಂಬದವರು ಬರುತ್ತಿದ್ದಾರೆ. ದರ್ಶನ್​ ಪತ್ನಿ ವಿಜಯಲಕ್ಷ್ಮಿ (Darshan wife Vijayalakshmi) ಹಾಗೂ ಪುತ್ರ ವಿನೀಶ್​ ಅವರು ಇಂದು (ಜೂನ್​ 23) ಜೈಲಿನ ಬಳಿ ಬಂದಿದ್ದರು. ಆದರೆ ಜೈಲಿನ ಮುಂಭಾಗದಲ್ಲಿ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿದ ಕೂಡಲೇ ಅವರು ವಾಪಸ್​ ತೆರಳಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬ ವ್ಯಕ್ತಿಯ ಭೀಕರ ಕೊಲೆ ಪ್ರಕರಣದಲ್ಲಿ ದರ್ಶನ್​ ಎ2 ಆಗಿದ್ದು, ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗುತ್ತಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿಚಾರಣೆ ತೀವ್ರವಾದಂತೆಲ್ಲ ಅನೇಕ ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ಈ ಕೇಸ್​ನಲ್ಲಿ ದರ್ಶನ್​ ಸ್ನೇಹಿತೆ ಪವಿತ್ರಾ ಗೌಡ ಎ1 ಆಗಿದ್ದಾರೆ. ಇನ್ನುಳಿದ ಸಹಚರರು ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More