ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಪ್ರೀತಿಯ ಹಾರೈಕೆ

Updated on: Mar 02, 2025 | 7:55 PM

ನಟ ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಮುಂತಾದವರು ಸಾಮೂಹಿಕ ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು. ಈ ವೇಳೆ ಅವರು ಮಾತನಾಡಿದರು. ‘ಇಲ್ಲಿರುವ ಎಲ್ಲಾ ರೈತರಿಗೆ ಮತ್ತು ರೈತರ ಮಕ್ಕಳಿಗೂ ಒಳ್ಳೆಯದಾಗಲಿ’ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಶುಭ ಕೋರಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಮಂಡ್ಯದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಅವರು ಭಾಗಿ ಆಗಿದ್ದಾರೆ. ಈ ವೇಳೆ ಎಲ್ಲರಿಗೂ ಅವರು ಶುಭ ಹಾರೈಸಿದರು. ‘ಇವತ್ತು ಮದುವೆ ಆದ ಎಲ್ಲ ಗಂಡು-ಹೆಣ್ಣಿಗೆ ಜೀವನ ಚೆನ್ನಾಗಿರಲಿ. ಜೀವನದಲ್ಲಿ ಖುಷಿ, ನೆಮ್ಮದಿ ಇರಲಿ. ಇಲ್ಲಿ ಇರುವ ಎಲ್ಲ ರೈತರಿಗೆ ಹಾಗೂ ರೈತರ ಮಕ್ಕಳಿಗೆ ಒಳ್ಳೆಯದಾಗಲಿ’ ಎಂದು ವಿಜಯಲಕ್ಷ್ಮಿ ಅವರು ಶುಭ ಕೋರಿದರು. ಈ ವೇಳೆ ನಟ ಧನ್ವೀರ್ ಕೂಡ ಮಾತನಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More