‘ಯಾವಾಗಲೂ ದರ್ಶನ್ ನನ್ನ ಮಗ, ಅದು ಬದಲಾಗಲ್ಲ’: ಸುಮಲತಾ ಅಂಬರೀಷ್
ನಟ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದು, ಆ ಕುರಿತು ನಟಿ ಸುಮಲತಾ ಅಂಬರೀಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಅವರನ್ನು ಸದ್ಯಕ್ಕೆ ಸುಮಲತಾ ಭೇಟಿ ಆಗಿಲ್ಲ. ವಿಜಯಲಕ್ಷ್ಮಿ ಜೊತೆ ತಾವು ಸಂಪರ್ಕದಲ್ಲಿ ಇರುವುದಾಗಿ ಸಮಲತಾ ತಿಳಿಸಿದ್ದಾರೆ. ‘ನಾವು ನೈತಿಕ ಬೆಂಬಲ ನೀಡುತ್ತೇವೆ. ದರ್ಶನ್ಗೆ ಒಳ್ಳೆಯದು ಆಗಲಿ ಎಂಬ ನಿರೀಕ್ಷೆಯಲ್ಲಿ ನಾವು ಇದ್ದೇವೆ’ ಎಂದಿದ್ದಾರೆ ಸುಮಲತಾ ಅಂಬರೀಷ್.
‘ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆ ನಾನು ಸಂಪರ್ಕದಲ್ಲಿ ಇದ್ದೇನೆ. ದರ್ಶನ್ಗೆ ಚಿಕಿತ್ಸೆ ನಡೆಯುತ್ತಿದೆ. ಮೊದಲು ಅವರು ವಿಶ್ರಾಂತಿ ಪಡೆದುಕೊಂಡು ಆರೋಗ್ಯ ಸರಿಪಡಿಸಿಕೊಳ್ಳಲಿ. ಕಾನೂನಿನ ಸವಾಲು ಎದುರಿಸಿ ಅವರು ಹೊರಬರಬೇಕು ಅಂತ ಆಸೆ ಇಟ್ಟುಕೊಂಡಿದ್ದೇವೆ. ನಮ್ಮ ಸಂಬಂಧ ಹಾಗೆಯೇ ಉಳಿಯುತ್ತದೆ. ನನ್ನ ಲೈಫ್ ಇರುವವರೆಗೂ ದರ್ಶನ್ ನನ್ನ ಮಗನೇ. ನಿಜಾಂಶ ಏನು ಎಂಬುದು ಹೊರಗೆ ಬರಬೇಕು. ದರ್ಶನ್ಗೆ ಒಳ್ಳೆಯದಾಗಬೇಕು. ಅವರು ನಿರಪರಾಧಿ ಅಂತ ಸಾಬೀತಾಗಬೇಕು ಎಂಬುದು ನನ್ನ ಆಸೆ’ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us