ದರ್ಶನ್ಗೆ ಎದುರಾಗಬಹುದು ’ಸುಪ್ರೀಮ್’ ಸಂಕಷ್ಟ, ಜಾಮೀನು ನೀಡಿದ್ದನ್ನು ಪ್ರಶ್ನಿಸಲು ಪೊಲೀಸ್ ತಯಾರಿ
ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನ ಸಭಾ ಪೊಲೀಸ್ ಠಾಣೆಯಲ್ಲಿ ಎರಡು ದಿನಗಳ ಹಿಂದೆ ಎಫ್ಐಅರ್ ದಾಖಲಾಗಿದೆ, ಇದುವರೆಗೆ ಯಾರಿಗೂ ನೋಟೀಸ್ ನೀಡಿಲ್ಲ, ಕೆಲ ಅಧಿಕಾರಿಗಳ ವಿರುದ್ಧ ಕೇಸನ್ನು ದಾಖಲಿಸಲಾಗಿದೆ, ವಿಧಾನ ಸಭಾ ಠಾಣೆಯ ಅಧಿಕಾರಿಗಳು ತನಿಖೆಯನ್ನು ನಡೆಸಲಿದ್ದಾರೆ ಎಂದು ಪೊಲೀಸ್ ಕಮೀಶನರ್ ದಯಾನಂದ ಹೇಳಿದರು.
ಬೆಂಗಳೂರು: ಸುಮಾರು ಎರಡು ತಿಂಗಳ ಅವಧಿಯಲ್ಲಿ ಎರಡೆರಡು ಜಾಮೀನುಗಳನ್ನು ಪಡೆದು ನಿರಾಳರಾಗಿರುವ ನಟ ದರ್ಶನ್ಗೆ ಮುಂದಿನ ದಿನಗಳಲ್ಲಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ದರ್ಶನ್ಗೆ ನೀಡಿರುವ ಜಾಮೀನನ್ನು ಪ್ರಶ್ನಿಸಿ ನಗರ ಪೊಲೀಸ್ ಸುಪ್ರೀಮ್ ಕೋರ್ಟ್ ಗೆ ಮನವಿ ಸಲ್ಲಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ನಗರದಲ್ಲಿಂದು ಮಾಧ್ಯಮಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಪೊಲೀಸ್ ಕಮೀಶನರ್ ಬಿ ದಯಾನಂದ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Darshan Arrest: ದರ್ಶನ್ ಬಂಧನ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಹೇಳಿದ್ದೇನು? ವಿಡಿಯೋ ನೋಡಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

