ದರ್ಶನ್​ಗೆ ಬೇಲ್ ಸಿಗದಿದ್ದರೂ ಚಿಂತೆಯಿಲ್ಲ, ಮುಂದೆ ಖಂಡಿತ ಸಿಗುತ್ತದೆ ಎನ್ನುತ್ತಾರೆ ಅಭಿಮಾನಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Oct 14, 2024 | 6:57 PM

ದರ್ಶನ್ ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ಹೆಚ್ಚು ಚಿಂತಿತರಾಗಿದ್ದಾರೆ. ನವರಾತ್ರಿ ಉತ್ಸವದ ಬಳಿಕ ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಬಾಸ್ ಗೆ ಬೇಲ್ ಸಿಗುತ್ತದೆ ಎಂಬ ನಂಬಿಕೆ ಇತ್ತು, ಮುಂದೆ ಸಿಗಲಿದೆ, ತಪ್ಪೋ ಒಪ್ಪೋ ನಮಗೆ ಗೊತ್ತಿಲ್ಲ, ಆದರೆ ನಮ್ಮ ಬಾಸ್ ಹೊರಗೆ ಬಂದೇ ಬರುತ್ತಾರೆ ಎಂದು ಟಿವಿ9ಗೆ ಅಭಿಮಾನಿಗಳು ತಿಳಿಸಿದ್ದಾರೆ.

ಬಳ್ಳಾರಿ: ದರ್ಶನ್ ಅಭಿಮಾನಿಗಳ ನಿರೀಕ್ಷೆ ಹುಸಿ ಹೋಗಿದೆ. ರಾಜ್ಯದ ಖ್ಯಾತ ಕ್ರಿಮಿನಲ್ ಲಾಯರ್ ಸಿವಿ ನಾಗೇಶ್ ಅವರು ನಟನ ಜಾಮೀನಿಗಾಗಿ ವಾದಿಸಿದರೂ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ. ಹಾಗಂತ, ಇವತ್ತು ತಮ್ಮ ನೆಚ್ಚಿನ ನಟ ಬಳ್ಳಾರಿ ಸೆಂಟ್ರಲ್ ಜೈಲಿಂದ ಬಿಡುಗಡೆ ಆಗೇ ಆಗುತ್ತಾರೆ ಅಂತ ಕಾಯುತ್ತಾ ನಿಂತಿದ್ದ ಅಭಿಮಾನಿ ಉತ್ಸಾಹವೇನೂ ಕುಗ್ಗಿಲ್ಲ. ಇಂದು ಸಿಗದಿದ್ದರೇನಾಯ್ತು ನಾಳೆ ಸಿಕ್ಕೇ ಸಿಕ್ಕುತ್ತೆ ಎಂಬ ವಿಶ್ವಾಸದಲ್ಲಿ ಅವರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ಗೆ ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್; ದಾಸನಿಗೆ ಜೈಲೇ ಗತಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.