ಪತಿಯನ್ನು ನೋಡಲು ಮೂರು ಬ್ಯಾಗ್ ಸಾಮಾನುಗಳೊಂದಿಗೆ ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Aug 31, 2024 | 5:54 PM

ವಿಜಯಲಕ್ಷ್ಮಿ ಅವರನ್ನು ಭೇಟಿಯಾಗಲು, ಅವರೊಂದಿಗೆ ಮಾತುಕತೆ ನಡೆಸಲು ದರ್ಶನ್ ರನ್ನು ಸಂದರ್ಶಕರ ಕೋಣೆಗೆ ತರುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಬೆಂಗಳೂರು ಜೈಲಲ್ಲಿ ಕೈಯಲ್ಲಿ ಸಿಗರೇಟು ಮತ್ತು ಕಾಫಿ ಮಗ್ ಹಿಡಿದು ನಗುತ್ತ ಕೂತಿದ್ದ ದರ್ಶನ್ ಮುಖ ಮೂರು ದಿನಗಳಲ್ಲಿ ನಿಸ್ತೇಜಗೊಂಡಿದೆ.

ಬಳ್ಳಾರಿ: ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಅವರ ಗೋಳು ಪಡುತ್ತಿರುವ ತಾಪತ್ರಯ ಸಾಮಾನ್ಯವಾದುದಲ್ಲ. ಪತಿ ಬೆಂಗಳೂರಿನ ಸೆಂಟ್ರಲ್ ಜೈಲಲ್ಲಿದ್ದಾಗ ಅಲ್ಲಿಗೆ ಹೋಗಿ ಬರುವುದು ಅವರಿಗೆ ಸಮಸ್ಯೆ ಇರಲಿಲ್ಲ. ಅದರೆ ಈಗ ಬಳ್ಳಾರಿವರೆಗೆ ಬರುವ ಅನಿವಾರ್ಯತೆ. ಅದರೆ ವಿಜಯಲಕ್ಷ್ಮಿ ಅಧೀರರಾಗಿಲ್ಲ. ಇವತ್ತು ದರ್ಶನ್ ಗೆ ಅಗತ್ಯವಿರುವ ಸಾಮಾನುಗಳ ಮೂರು ಬ್ಯಾಗ್​ಗಳನ್ನು ಹೊತ್ತು ಅವರು ಬಳ್ಳಾರಿ ಸೆಂಟ್ರಲ್ ಜೈಲಿಗೆ ಬಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ರನ್ನು ಐಸೋಲೇಟ್ ಮಾಡಿ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ: ಟಿಪಿ ಶೇಷ, ಡಿಐಜಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.