ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ ಆರಂಭ: ಗಜಪಡೆ ಸಾಗುವ ರಸ್ತೆಯಲ್ಲಿ ಮರದ ಕೊಂಬೆಗಳ ಕಟಾವು

Edited By:

Updated on: Sep 27, 2023 | 3:51 PM

Mysore Dasara: ಮೈಸೂರಿನಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿವೆ. ನಾಡಹಬ್ಬಕ್ಕೆ ಸದ್ಯ ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಗಜಪಡೆ ಸಾಗುವ ಮಾರ್ಗದ ರಸ್ತೆಗೆ ಚಾಚಿಕೊಂಡಿರುವ ಮರದ ಕೊಂಬೆಗಳ ಕಟಾವು ಮಾಡಲಾಗಿದೆ.

ಮೈಸೂರು, ಸೆಪ್ಟೆಂಬರ್​ 27: ಮೈಸೂರಿನಲ್ಲಿ ಐತಿಹಾಸಿಕ ದಸರಾ (Dasara) ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿವೆ. ನಾಡಹಬ್ಬಕ್ಕೆ ಸದ್ಯ ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಗಜಪಡೆ ಸಾಗುವ ಮಾರ್ಗದ ರಸ್ತೆಗೆ ಚಾಚಿಕೊಂಡಿರುವ ಮರದ ಕೊಂಬೆಗಳ ಕಟಾವು ಮಾಡಲಾಗಿದೆ. ಅರಮನೆಯಿಂದ ಬನ್ನಿ ಮಂಟಪದವರೆಗೂ ರಂಬೆ, ಕೊಂಬೆಗಳ ಕಟಾವು ಮಾಡಲಾಗಿದ್ದು, ಸಯ್ಯಾಜಿರಾವ್ ರಸ್ತೆ, ಕೆ.ಆರ್ ವೃತ್ತ ಸೇರಿ ಹಲವೆಡೆ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇದೆ ಮಾರ್ಗವಾಗಿ ಗಜಪಡೆ ದಿನಕ್ಕೆ 2 ಬಾರಿ ತಾಲೀಮು ನಡೆಸುತ್ತಿವೆ. ಯಾವುದೇ ಅಡೆತಡೆಗಳು ಉಂಟಾಗದಂತೆ ಪಾಲಿಕೆ ಎಚ್ಚರಿಕೆ ವಹಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More