ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ

Edited By:

Updated on: Jul 19, 2026 | 6:16 PM

ಪುತ್ರಿ ಅನುಸೂಯ ತಾಯಿ ಚೆನ್ನಮ್ಮ ಬಗ್ಗೆ ಟಿವಿ9ನ ಜೊತೆ ಹಂಚಿಕೊಂಡಿದ್ದು, ಅಮ್ಮ ಮುತ್ತೈದೆ ಸಾವನ್ನ ಬಯಸಿದ್ದರು. ಅದರಂತೆ ಮುತ್ತೈದೆಯಾಗಿ ಪ್ರಾಣ ಬಿಟ್ಟಿದ್ದಾರೆ. ಒಂದು ಕಡೆ ಅವರ ಅಗಲಿಕೆ ನೋವಿದ್ದರೆ ಮತ್ತೊಂದೆಡೆ ಮುತ್ತೈದೆಯಾಗಿ ಸಾವನಪ್ಪಿರೋದು ತೃಪ್ತಿ ಇದೆ. ಅಪ್ಪ ಯಾವಾಗಲೂ ಹೇಳುತ್ತಿದ್ದರು ಮೊದಲು ನೀನು ಹೋಗು ಹಿಂದೆ ನಾನು ಬರುತ್ತೇನೆ ಎಂದು ಅದೇ ರೀತಿ ಮುತ್ತೈದೆಯಾಗಿ ಹೋಗಿದ್ದಾರೆ ಎಂದರು.

ಬೆಂಗಳೂರು, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದೆ. ಬೆಂಗಳೂರಿನ ನಿವಾಸದಿಂದ ಚೆನ್ನಮ್ಮರ ಪಾರ್ಥಿವ ಶರೀರವನ್ನು ಕೊಂಡೊಯ್ಯುವ ವೇಳೆ ದೇವೇಗೌಡ್ರು ಬಿಕ್ಕಿ ಬಿಕ್ಕ ಅತ್ತರು. ಇನ್ನು ಪುತ್ರಿ ಅನುಸೂಯ ತಾಯಿ ಚೆನ್ನಮ್ಮ ಬಗ್ಗೆ ಟಿವಿ9ನ ಜೊತೆ ಹಂಚಿಕೊಂಡಿದ್ದು, ಅಮ್ಮ ಮುತ್ತೈದೆ ಸಾವನ್ನ ಬಯಸಿದ್ದರು. ಅದರಂತೆ ಮುತ್ತೈದೆಯಾಗಿ ಪ್ರಾಣ ಬಿಟ್ಟಿದ್ದಾರೆ. ಒಂದು ಕಡೆ ಅವರ ಅಗಲಿಕೆ ನೋವಿದ್ದರೆ ಮತ್ತೊಂದೆಡೆ ಮುತ್ತೈದೆಯಾಗಿ ಸಾವನಪ್ಪಿರೋದು ತೃಪ್ತಿ ಇದೆ. ಅಪ್ಪ ಯಾವಾಗಲೂ ಹೇಳುತ್ತಿದ್ದರು ಮೊದಲು ನೀನು ಹೋಗು ಹಿಂದೆ ನಾನು ಬರುತ್ತೇನೆ ಎಂದು ಅದೇ ರೀತಿ ಮುತ್ತೈದೆಯಾಗಿ ಹೋಗಿದ್ದಾರೆ ಎಂದರು.

ಪ್ರತಿ ವಿಚಾರದಲ್ಲೂ ಮಕ್ಕಳಿಗೆ ಅಮ್ಮ ಸಪೋರ್ಟ್ ಮಾಡಿದ್ದಾರೆ. ಅಪ ರಾಜಕೀಯವಾಗಿ ಹೊರಗಡೆ ಇದ್ದಾಗ 70 ಪರ್ಸೆಂಟ್ ಅಮ್ಮನೇ ನಮ್ಮನ್ನ ಬೆಳೆಸಿ ನೋಡಿದ್ದಾರೆ . ಸುದೀರ್ಘ 72 ವರ್ಷಗಳ ಕಾಲ ಅಪ್ಪ ಅಮ್ಮ ಜೀವನ ನಡೆಸಿದ್ದಾರೆ ಒಂದು ದಿನವೂ ಜಗಳ ಆಡಿಲ್ಲ ಎಂದು ತಾಯಿ ಚೆನ್ನಮ್ಮನ ಬಗ್ಗೆ ಎಳೆ ಎಳೆಯಾಗಿ ಬಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us