AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Mar 14, 2026 | 4:01 PM

Share

ತಂದೆ ತಾಯಿಯರ ಅಂತಿಮ ಸಂಸ್ಕಾರವನ್ನು ಗಂಡು ಮಕ್ಕಳು ಮಾಡುವುದು ಸಾಮಾನ್ಯ. ತಂದೆಯ ಚಿತೆಗೆ ಮೊದಲು ಆತನ ಹಿರಿಯ ಮಗನೇ ಅಗ್ನಿ ಸ್ಪರ್ಶಮಾಡಬೇಕೆಂದು ಹಿಂದೂ ಸಂಪ್ರದಾಯದಲ್ಲಿ ಹೇಳಲಾಗಿದೆ. ಆದ್ರೆ, ಚಿಕ್ಕಮಗಳೂರಿನಲ್ಲಿ ಸಹೋದರಿಯರೇ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಹೌದು...ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ವಿಶ್ವನಾಥ್ ಎನ್ನುವರು ಮೃತಪಟ್ಟಿದ್ದು, ಇವರಿಗೆ ಗಂಡು ಮಕ್ಕಳು ಇಲ್ಲ. ಹೀಗಾಗಿ ಇವರ ಅಂತ್ಯಕ್ರಿಯೆಯನ್ನು ಇಬ್ಬರು ಪುತ್ರಿಯರು ಸೇರಿಕೊಂಡು ನೆರವೇರಿಸಿದ್ದಾರೆ.

ಚಿಕ್ಕಮಗಳೂರು, (ಮಾರ್ಚ್ 14): ತಂದೆ ತಾಯಿಯರ ಅಂತಿಮ ಸಂಸ್ಕಾರವನ್ನು ಗಂಡು ಮಕ್ಕಳು ಮಾಡುವುದು ಸಾಮಾನ್ಯ. ತಂದೆಯ ಚಿತೆಗೆ ಮೊದಲು ಆತನ ಹಿರಿಯ ಮಗನೇ ಅಗ್ನಿ ಸ್ಪರ್ಶಮಾಡಬೇಕೆಂದು ಹಿಂದೂ ಸಂಪ್ರದಾಯದಲ್ಲಿ ಹೇಳಲಾಗಿದೆ. ಆದ್ರೆ, ಚಿಕ್ಕಮಗಳೂರಿನಲ್ಲಿ ಸಹೋದರಿಯರೇ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಹೌದು…ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ವಿಶ್ವನಾಥ್ ಎನ್ನುವರು ಮೃತಪಟ್ಟಿದ್ದು, ಇವರಿಗೆ ಗಂಡು ಮಕ್ಕಳು ಇಲ್ಲ. ಹೀಗಾಗಿ ಇವರ ಅಂತ್ಯಕ್ರಿಯೆಯನ್ನು ಇಬ್ಬರು ಪುತ್ರಿಯರು ಸೇರಿಕೊಂಡು ನೆರವೇರಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಭಾವಸಾರ ಕ್ಷತ್ರಿಯ ಸಮಾಜದಂತೆ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಿ ಅಗ್ನಿ ಸ್ಪರ್ಷ ಮಾಡಿದರು. ಇನ್ನು ಇವರ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹೆಣ್ಣು ಮಕ್ಕಳು ತಂದೆಯ ಅಂತ್ಯಸಂಸ್ಕಾರವನ್ನು ತಾವೇ ನೆರವೇರಿಸುವ ಮೂಲಕ ಲಿಂಗಸಮಾನತೆಯ ಸಂದೇಶವನ್ನು ಸಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 14, 2026 03:55 PM
Follow Us