Davanagere: ಆಧಾರ್ ಕಾರ್ಡ್ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ರೂ. 1000 ಶುಲ್ಕ ವಿರೋಧಿಸಿ ಪ್ರತಿಭಟನೆಗಿಳಿದ ಕಾಂಗ್ರೆಸ್ ಕಾರ್ಯಕರ್ತರು
ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಲು 31ನೇ ಮಾರ್ಚ್ ಕೊನೆಯ ದಿನಾಂಕವಾಗಿದ್ದು ಅದರೊಳಗೆ ಮಾಡಿಸದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ ಎಂದು ಹೇಳಲಾಗಿದೆ.
ದಾವಣಗೆರೆ: ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡನ್ನು ಲಿಂಕ್ ಮಾಡುವುದು ಮೊದಲೆಲ್ಲ ಶುಲ್ಕರಹಿತವಾಗಿತ್ತು. ಆದರೆ ಈ ಪ್ರಕ್ರಿಯೆಗೆ ಶುಲ್ಕ ವಿಧಿಸಲಾಗುತ್ತಿದೆ. ಆದಾಯ ತೆರಿಗೆ ಇಲಾಖೆ (Income Tax department) ಕ್ರಮವನ್ನು ವಿರೋಧಿಸಿ ಇಂದು ದಾವಣಗೆರೆ ನಗರದಲ್ಲಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು (Congress workers) ದಾವಣಗೆರೆ ವನ್ ಸೆಂಟರ್ ಎದುರು ಪ್ರತಿಭಟನೆ (protest) ನಡೆಸಿದರು. ಕೈಯಲ್ಲಿ ಆಧಾರ್ ಮತ್ತು ಪ್ಯಾನ್ ಕಾರ್ಡ್ ಗಳ ಪ್ರತಿಗಳನ್ನು ಹಿಡಿದಿದ್ದ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಂದಹಾಗೆ, ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಲು 31ನೇ ಮಾರ್ಚ್ ಕೊನೆಯ ದಿನಾಂಕವಾಗಿದ್ದು ಅದರೊಳಗೆ ಮಾಡಿಸದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ ಎಂದು ಹೇಳಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್

