Davanagere: ಆಧಾರ್ ಕಾರ್ಡ್​ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ರೂ. 1000 ಶುಲ್ಕ ವಿರೋಧಿಸಿ ಪ್ರತಿಭಟನೆಗಿಳಿದ ಕಾಂಗ್ರೆಸ್ ಕಾರ್ಯಕರ್ತರು

ಅರುಣ್​ ಕುಮಾರ್​ ಬೆಳ್ಳಿ

Updated on: Mar 28, 2023 | 10:57 AM

ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಲು 31ನೇ ಮಾರ್ಚ್ ಕೊನೆಯ ದಿನಾಂಕವಾಗಿದ್ದು ಅದರೊಳಗೆ ಮಾಡಿಸದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ ಎಂದು ಹೇಳಲಾಗಿದೆ.

ದಾವಣಗೆರೆ: ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡನ್ನು ಲಿಂಕ್ ಮಾಡುವುದು ಮೊದಲೆಲ್ಲ ಶುಲ್ಕರಹಿತವಾಗಿತ್ತು. ಆದರೆ ಈ ಪ್ರಕ್ರಿಯೆಗೆ ಶುಲ್ಕ ವಿಧಿಸಲಾಗುತ್ತಿದೆ. ಆದಾಯ ತೆರಿಗೆ ಇಲಾಖೆ (Income Tax department) ಕ್ರಮವನ್ನು ವಿರೋಧಿಸಿ ಇಂದು ದಾವಣಗೆರೆ ನಗರದಲ್ಲಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು (Congress workers) ದಾವಣಗೆರೆ ವನ್ ಸೆಂಟರ್ ಎದುರು ಪ್ರತಿಭಟನೆ (protest) ನಡೆಸಿದರು. ಕೈಯಲ್ಲಿ ಆಧಾರ್ ಮತ್ತು ಪ್ಯಾನ್ ಕಾರ್ಡ್ ಗಳ ಪ್ರತಿಗಳನ್ನು ಹಿಡಿದಿದ್ದ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಂದಹಾಗೆ, ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಲು 31ನೇ ಮಾರ್ಚ್ ಕೊನೆಯ ದಿನಾಂಕವಾಗಿದ್ದು ಅದರೊಳಗೆ ಮಾಡಿಸದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ ಎಂದು ಹೇಳಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.