AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Mar 23, 2026 | 9:35 AM

Share

ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್​ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ್ದರಿಂದ ರೊಚ್ಚಿಗೆದ್ದಿರುವ 12ನೇ ವಾರ್ಡ್‌ನ ಯುವಕರು, ಶಫೀಕ್ ಪಂಡಿತ್ ಶಿಷ್ಯರು ಶ್ರೀನಿವಾಸ್​ಗೆ ಬೆಂಬಲ ಘೋಷಿಸಿದರು. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷಕ್ಕೆ ಬಲ ತುಂಬಿದೆ.

ದಾವಣಗೆರೆ, ಮಾರ್ಚ್ 23: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್​​​ನಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವುದಕ್ಕೂ ಕಾರಣವಾಗುತ್ತಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಸಿಗದೇ ಇರುವುದರಿಂದ ಅಸಮಾಧಾನಗೊಂಡಿರುವ 12ನೇ ವಾರ್ಡ್‌ನ ಯುವಕರು, ‘ಕೈ’ ಮುಖಂಡ ಶಫೀಕ್ ಪಂಡಿತ್ ಅವರ ಶಿಷ್ಯರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 23, 2026 09:28 AM
Follow Us