ಹವಾನಿಯಂತ್ರಿತ ಕ್ಕಿನಿಕ್ ನಿಂದ ಹೊರಬಂದು ದಾವಣಗೆರೆಯ ಸುಡುಬಿಸಿಲಲ್ಲಿ ಮತಯಾಚಿಸುತ್ತಿರುವ ಡಾ ಪ್ರಭಾ ಮಲ್ಲಿಕಾರ್ಜುನ

Updated on: Apr 08, 2024 | 12:14 PM

15 ದಿನಗಳ ಹಿಂದೆ ಗ್ರಾಮದಲ್ಲಿ ನಡೆದ ಚೌಡಮ್ಮ ದೇವಿ ಜಾತ್ರೆಗೆ ಬಂದಿದ್ದನ್ನು ಹೇಳಿದ ಡಾ ಪ್ರಭಾ ದೇವಿಯ ಆಶೀರ್ವಾದ ಪಡೆದುಕೊಂಡಾಗಿದೆ ಈಗ ಜನರ ಆಶೀರ್ವಾದ ಬೇಕಾಗಿದೆ, ಸರಿಯಾಗಿ ಒಂದು ತಿಂಗಲ ನಂತರ ಲೋಕಸಭಾ ಚುನಾವಣೆಗೆ ನಡೆಯುವ ಮತದಾನದಲ್ಲಿ ಮತದಾರರು ತನ್ನ ಪರವಾಗಿ ತಮ್ಮ ಹಕ್ಕು ಚಲಾಯಿಸಬೇಕೆಂದು ವಿನಂತಿಸಿಕೊಂಡರು.

ದಾವಣಗೆರೆ: ದಂತವೈದ್ಯೆಯೂ ಅಗಿರುವ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಪ್ರಭಾ ಮಲ್ಲಿಕಾರ್ಜುನ (Dr Prabha Mallikarjun) ತಮ್ಮ ಹವಾನಿಯಂತ್ರಿತ ಕ್ಲಿನಿಕ್ ಬಿಟ್ಟು ಸುಡು ಬಿಸಿಲಲ್ಲಿ ದಾವಣಗೆರೆಯ ಹಳ್ಳಿಗಳನ್ನು ಸುತ್ತುತ್ತಾ ಮತ ಯಾಚಿಸುತ್ತಿದ್ದಾರೆ. ಇಂದು ಅವರು ಜಗಳೂರು ತಾಲ್ಲೂಕಿನ ಗ್ರಾಮಮಗಳಲ್ಲಿ ರೋಡ್ ಶೋಗಳನ್ನು (road show) ನಡೆಸುತ್ತಾ ವೋಟುಗಳ ಬೇಟೆ (campaigning) ನಡೆಸಿದರು. ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಪ್ರಚಾರ ನಡೆಸಿದ ಅವರು ತೆರೆದ ವಾಹನವೊಂದರಿಂದ ಜನರನ್ನು ಅಡ್ರೆಸ್ ಮಾಡುವಾಗ ತಾನು ಅವರಿಗೆ ಮತ್ತು ಆ ಊರಿಗೆ ಹೊಸಬಳೇನೂ ಅಲ್ಲ ಅನ್ನೋದನ್ನು ಒತ್ತಿ ಹೇಳಿದರು. 15 ದಿನಗಳ ಹಿಂದೆ ಗ್ರಾಮದಲ್ಲಿ ನಡೆದ ಚೌಡಮ್ಮ ದೇವಿ ಜಾತ್ರೆಗೆ ಬಂದಿದ್ದನ್ನು ಹೇಳಿದ ಡಾ ಪ್ರಭಾ ದೇವಿಯ ಆಶೀರ್ವಾದ ಪಡೆದುಕೊಂಡಾಗಿದೆ ಈಗ ಜನರ ಆಶೀರ್ವಾದ ಬೇಕಾಗಿದೆ, ಸರಿಯಾಗಿ ಒಂದು ತಿಂಗಲ ನಂತರ ಲೋಕಸಭಾ ಚುನಾವಣೆಗೆ ನಡೆಯುವ ಮತದಾನದಲ್ಲಿ ಮತದಾರರು ತನ್ನ ಪರವಾಗಿ ತಮ್ಮ ಹಕ್ಕು ಚಲಾಯಿಸಬೇಕೆಂದು ವಿನಂತಿಸಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Lok Sabha elections: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​​​ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More