AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ ಮತ್ತು ಎಲ್ಲಿ?

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ ಮತ್ತು ಎಲ್ಲಿ?

ಗಂಗಾಧರ​ ಬ. ಸಾಬೋಜಿ
|

Updated on:Dec 15, 2025 | 7:32 PM

Share

ದಾವಣಗೆರೆಯ ಆನೆಕೊಂಡದಲ್ಲಿರೋ ಶಾಮನೂರು ಒಡೆತನದ ಕಲ್ಲೇಶ್ವರ ರೈಸ್‌ಮಿಲ್ ಆವರಣದಲ್ಲಿ ಇಂದು ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿವಿಧಾನ ನೆರವೇರಿತು. ಮಠಾಧೀಶರು, ರಾಜಕೀಯ ನಾಯಕರು ಭಾಗವಹಿಸಿದ್ದರು. ಇನ್ನು ಡಿಸೆಂಬರ್ 26ರಂದು ಮಧ್ಯಾಹ್ನ 12.30ಕ್ಕೆ ಕಲ್ಲೇಶ್ವರ ಮಿಲ್​ ಆವರಣದಲ್ಲೇ ಕೈಲಾಸ ಶಿವಗಣಾರಾಧನೆ ನಡೆಯಲಿದೆ ಎಂದು ಕುಟುಂಬಸ್ಥರು ಆಹ್ವಾನ್​ ನೀಡಿದ್ದಾರೆ.

ದಾವಣಗೆರೆ, ಡಿಸೆಂಬರ್​​ 15: ದಾವಣಗೆರೆಯ ಧಣಿ ಅಂತಾನೇ ಕರೆಸಿಕೊಳ್ಳುತ್ತಿದ್ದ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ತಮ್ಮ ಸುಧೀರ್ಘ, ಸಾರ್ಥಕ ಬದುಕಿನ ಪಯಣ ಅಂತ್ಯಗೊಳಿಸಿದ್ದಾರೆ. ಇಂದು ನಗರದ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪಂಚಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಪತ್ನಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ಮಾಡಲಾಗಿದೆ. ಇನ್ನು ಡಿಸೆಂಬರ್ 26ರಂದು ಮಧ್ಯಾಹ್ನ 12.30ಕ್ಕೆ ಕಲ್ಲೇಶ್ವರ ಮಿಲ್​ ಆವರಣದಲ್ಲೇ ಕೈಲಾಸ ಶಿವಗಣಾರಾಧನೆ ನಡೆಯಲಿದೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರರಾದ ಬಕ್ಕೇಶ್, ಗಣೇಶ್ ಮತ್ತು ಮಲ್ಲಿಕಾರ್ಜುನ್ ಕುಟುಂಬಸ್ಥರಿಂದ ಆಹ್ವಾನಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Dec 15, 2025 07:31 PM

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More