ನ್ಯಾಮತಿ ಎಸ್​​ಬಿಐನಿಂದ ₹13 ಕೋಟಿ ಮೌಲ್ಯದ ಚಿನ್ನ ದರೋಡೆ ಪ್ರಕರಣ ಭೇದಿಸಿದ ದಾವಣಗೆರೆ ಪೊಲೀಸ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 31, 2025 | 6:48 PM

ದಾವಣಗೆರೆ ಪೊಲೀಸ್ ತಂಡದ ಕಾರ್ಯಕ್ಷಮತೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಕೊಂಡಾಡಿದ್ದಾರೆ ಮತ್ತು ನಗದು ಬಹುಮಾನವನ್ನೂ ಘೋಷಿಸಿದ್ದಾರೆ, ತಂಡದ ಸದಸ್ಯರ ಹೆಸರುಗಳನ್ನು ಮುಖ್ಯಮಂತ್ರಿಯವರ ಚಿನ್ನದ ಪದಕ ಪುರಸ್ಕಾರಕ್ಕಾಗಿ ಶಿಫಾರಸ್ಸು ಮಾಡಲಾಗಿದೆ, ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಸಹ ಪ್ರಕರಣ ಬೇಧಿಸಿದ ಪೊಲೀಸರಿಗೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ ಎಂದು ರವಿಕಾಂತೇಗೌಡ ಹೇಳಿದರು.

ದಾವಣಗೆರೆ, ಮಾರ್ಚ್ 31: ಜಿಲ್ಲೆಯ ನ್ಯಾಮತಿ ಎಸ್​ಬಿಐ ಬ್ಯಾಂಕಿನಲ್ಲಿ ಸುಮಾರು 6 ತಿಂಗಳ ಹಿಂದೆ ನಡೆದಿದ್ದ ಹದಿನೇಳೂವರೆ ಕೇಜಿ ಚಿನ್ನದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ವಿಷಯಕ್ಕೆ ಸಂಬಂಧಿಸಿದಂತೆ ಪೂರ್ವವಲಯದ ಐಜಿಪಿ ಬಿಅರ್ ರವಿಕಾಂತೇಗೌಡ (BR Ravikanthe Gowda) ಸುದ್ದಿಗೋಷ್ಠಿ ನಡೆಸಿ ಬಹಳಷ್ಟು ವಿವರಗಳನ್ನು ನೀಡಿದರು. ಪ್ರಕರಣದಲ್ಲಿ ಆರೋಪಿಗಳಾದ ಅಜಯ್ ಮತ್ತು ವಿಜಯ್ ಸೇರಿದಂತೆ ಒಟ್ಟು ಆರು ಜನರನ್ನು ಬಂಧಿಸಲಾಗಿದೆ. ಮೊದಲ ಬಾರಿಗೆ ದರೋಡೆ ನಡೆಸಿದ ಕಳ್ಳರ ತಂಡ ಬಹಳ ಚಾಕ್ಯಚಕ್ಯತೆಯಿಂದ ಇದುವರೆಗೆ ಪೊಲೀಸರ ಕಣ್ತಪ್ಪಿಸುವಲ್ಲಿ ಸಫಲವಾಗಿತ್ತು, ದರೋಡೆ ಮಾಡಿದ ಸುಮಾರು ರೂ. 13 ಕೋಟಿ ಮೌಲ್ಯದ ಚಿನ್ನವನ್ನು ಅರೋಪಿಗಳು ತಮಿಳುನಾಡು ಮಧುರೈನಲ್ಲಿರುವ ಇಸ್ಲಾಂಪೆಟ್ಟೈನಲ್ಲಿ ತೋಟದ ಮನೆಯಲ್ಲಿನ ಬಾವಿಯೊಂದರಲ್ಲಿ ಅಡಗಿಸಿಟ್ಟಿದ್ದಂತೆ. ಕಳುವಿನ ವಿಷಯವನ್ನು ಅವರು ತಮ್ಮ ಕುಟುಂಬದವರಿಗೂ ತಿಳಿಸಿರಲಿಲ್ಲ!

ಇದನ್ನೂ ಓದಿ:  ನ್ಯಾಮತಿ SBI ಬ್ಯಾಂಕ್ ದರೋಡೆ: ಪಾಳು ಬಾವಿಯಲ್ಲಿ 17 ಕೆಜಿ ಚಿನ್ನ ಬಚ್ಚಿಟ್ಟಿದ್ದ ಗ್ಯಾಂಗ್ ಅಂದರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.