ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳ ನಡುವೆ 20 ಮೀಟರ್ ಉದ್ದದ ತೂಗು ಕಾಲುವೆ ಒಡೆದಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಬೇಸಿಗೆ ಬೆಳೆಗಳಿಗೆ ನೀರು ಪೂರೈಸುವ ಈ ಕಾಲುವೆಯ ಒಡೆದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣದ ದುರಸ್ತಿಗೆ ರೈತರು ಆಗ್ರಹಿಸುತ್ತಿದ್ದಾರೆ. ನೀರಿನ ಅಭಾವದಿಂದ ಬೇಸಿಗೆ ಬೆಳೆಗಳು ಹಾನಿಗೀಡಾಗುವ ಆತಂಕವಿದೆ.
ದಾವಣಗೆರೆ ಜಿಲ್ಲೆಯಿಂದ ಭದ್ರಾವತಿ ಕಡೆ ಮುಖ್ಯ ಕಾಲುವೆಗೆ ಸಂಪರ್ಕ ಕಲ್ಪಿಸುವ 20 ಮೀಟರ್ ಉದ್ದದ ತೂಗು ಕಾಲುವೆ ಒಡೆದು ಹೋಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಿಗ್ಗೆನಹಳ್ಳಿ ಹಾಗೂ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ನಡುವೆ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಈ ಕಾಲುವೆ ಮುಖಾಂತರ ಬೇಸಿಗೆ ಬೆಳೆಗೆ ನೀರು ಹರಿಸಲಾಗುತ್ತದೆ. ಇದೀಗ ಕಾಲುವೆ ಒಡೆದು ನೀರು ಹಳ್ಳ ಸೇರುತ್ತಿದೆ. ತಕ್ಷಣಕ್ಕೆ ಸೂಕ್ತ ಕ್ರಮ ಕೈಗೊಂಡು ದುರಸ್ಥಿ ಮಾಡಿ ರೈತರ ಜಮೀನಿಗೆ ನೀರು ಬಿಡುವಂತೆ ರೈತರು ಆಗ್ರಹಿಸಿದ್ದಾರೆ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
