ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳ ನಡುವೆ 20 ಮೀಟರ್ ಉದ್ದದ ತೂಗು ಕಾಲುವೆ ಒಡೆದಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಬೇಸಿಗೆ ಬೆಳೆಗಳಿಗೆ ನೀರು ಪೂರೈಸುವ ಈ ಕಾಲುವೆಯ ಒಡೆದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣದ ದುರಸ್ತಿಗೆ ರೈತರು ಆಗ್ರಹಿಸುತ್ತಿದ್ದಾರೆ. ನೀರಿನ ಅಭಾವದಿಂದ ಬೇಸಿಗೆ ಬೆಳೆಗಳು ಹಾನಿಗೀಡಾಗುವ ಆತಂಕವಿದೆ.
ದಾವಣಗೆರೆ ಜಿಲ್ಲೆಯಿಂದ ಭದ್ರಾವತಿ ಕಡೆ ಮುಖ್ಯ ಕಾಲುವೆಗೆ ಸಂಪರ್ಕ ಕಲ್ಪಿಸುವ 20 ಮೀಟರ್ ಉದ್ದದ ತೂಗು ಕಾಲುವೆ ಒಡೆದು ಹೋಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಿಗ್ಗೆನಹಳ್ಳಿ ಹಾಗೂ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ನಡುವೆ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಈ ಕಾಲುವೆ ಮುಖಾಂತರ ಬೇಸಿಗೆ ಬೆಳೆಗೆ ನೀರು ಹರಿಸಲಾಗುತ್ತದೆ. ಇದೀಗ ಕಾಲುವೆ ಒಡೆದು ನೀರು ಹಳ್ಳ ಸೇರುತ್ತಿದೆ. ತಕ್ಷಣಕ್ಕೆ ಸೂಕ್ತ ಕ್ರಮ ಕೈಗೊಂಡು ದುರಸ್ಥಿ ಮಾಡಿ ರೈತರ ಜಮೀನಿಗೆ ನೀರು ಬಿಡುವಂತೆ ರೈತರು ಆಗ್ರಹಿಸಿದ್ದಾರೆ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
