ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ

Edited By: ವಿವೇಕ ಬಿರಾದಾರ

Updated on: Mar 18, 2025 | 10:25 AM

ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳ ನಡುವೆ 20 ಮೀಟರ್ ಉದ್ದದ ತೂಗು ಕಾಲುವೆ ಒಡೆದಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಬೇಸಿಗೆ ಬೆಳೆಗಳಿಗೆ ನೀರು ಪೂರೈಸುವ ಈ ಕಾಲುವೆಯ ಒಡೆದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣದ ದುರಸ್ತಿಗೆ ರೈತರು ಆಗ್ರಹಿಸುತ್ತಿದ್ದಾರೆ. ನೀರಿನ ಅಭಾವದಿಂದ ಬೇಸಿಗೆ ಬೆಳೆಗಳು ಹಾನಿಗೀಡಾಗುವ ಆತಂಕವಿದೆ.

ದಾವಣಗೆರೆ ಜಿಲ್ಲೆಯಿಂದ ಭದ್ರಾವತಿ ಕಡೆ ಮುಖ್ಯ ಕಾಲುವೆಗೆ ಸಂಪರ್ಕ ಕಲ್ಪಿಸುವ 20 ಮೀಟರ್ ಉದ್ದದ ತೂಗು ಕಾಲುವೆ ಒಡೆದು ಹೋಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಿಗ್ಗೆನಹಳ್ಳಿ ಹಾಗೂ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ನಡುವೆ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಈ ಕಾಲುವೆ ಮುಖಾಂತರ ಬೇಸಿಗೆ ಬೆಳೆಗೆ ನೀರು ಹರಿಸಲಾಗುತ್ತದೆ. ಇದೀಗ ಕಾಲುವೆ ಒಡೆದು ನೀರು ಹಳ್ಳ ಸೇರುತ್ತಿದೆ. ತಕ್ಷಣಕ್ಕೆ ಸೂಕ್ತ ಕ್ರಮ ಕೈಗೊಂಡು ದುರಸ್ಥಿ ಮಾಡಿ ರೈತರ ಜಮೀನಿಗೆ ನೀರು ಬಿಡುವಂತೆ ರೈತರು ಆಗ್ರಹಿಸಿದ್ದಾರೆ.

Loading...
Unable to load recommendations.
Follow Us