AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ

ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ

ಪ್ರಸನ್ನ ಗಾಂವ್ಕರ್​
| Edited By: |

Updated on: May 05, 2026 | 1:30 PM

Share

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದ್ದರೂ, ಗೆಲುವಿನ ಅಂತರ ಚಿಂತೆಗೆ ಕಾರಣವಾಗಿದೆ. ಸುಮಾರು 22,000 ಮುಸ್ಲಿಂ ಮತಗಳು ಎಸ್ಡಿಪಿಐ ಮತ್ತು ಇತರ ಅಭ್ಯರ್ಥಿಗಳ ಪಾಲಾಗಿವೆ. ಇದು ಕಾಂಗ್ರೆಸ್‌ನಿಂದ ಮುಸ್ಲಿಂ ಸಮುದಾಯ ದೂರ ಸರಿಯುತ್ತಿರುವುದರ ಸ್ಪಷ್ಟ ಸೂಚನೆ ಎಂದು ವಿಶ್ಲೇಷಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ 40-50 ಕ್ಷೇತ್ರಗಳ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

ದಾವಣಗೆರೆ, ಮೇ 05: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಕಾಂಗ್ರೆಸ್ ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿದೆ. ಇದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಎಸ್ಡಿಪಿಐ ಅಭ್ಯರ್ಥಿಗೆ ದಾಖಲೆಯ ಸುಮಾರು 19,000 ಮತಗಳು ಬಂದಿದ್ದು, ಇತರೆ ಮುಸ್ಲಿಂ ಅಭ್ಯರ್ಥಿಗಳಿಗೆ 2-3 ಸಾವಿರ ಮತಗಳು ಲಭಿಸಿವೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಹಾನಿಯನ್ನುಂಟು ಮಾಡಬಹುದು ಎಂದು ವಿಶ್ಲೇಷಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಅಸಮಾಧಾನವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎನ್ನಲಾಗ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us