ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್; ಅಯೂಬ್ ಪೈಲ್ವಾನ್
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲ ನಾಯಕರು ಫಂಡಿಂಗ್ ಮಾಡಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪಗಳು ಕೇಳಿಬಂದಿವೆ. ಎಐಸಿಸಿ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಹೇಳಿದ್ದಾರೆ. ತಮ್ಮ ಸಹೋದರ ಸಾದಿಕ್ ಪೈಲ್ವಾನ್ ಸಹ ಪಕ್ಷದ ಕೆಲಸದಲ್ಲಿ ಸಹಕರಿಸದಿರುವುದು ಚರ್ಚೆಗೆ ಕಾರಣವಾಗಿದೆ.
ದಾವಣಗೆರೆ, ಏಪ್ರಿಲ್ 11: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಕೆಲವರು ಹುನ್ನಾರ ನಡೆಸಿದ್ದರು. ಮತ್ತೆ ಕೆಲ ನಾಯಕರು ಫಂಡಿಂಗ್ ಸಹ ಮಾಡಿದ್ದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಂಡಿಂಗ್ ಮಾಡಿದವರ ಬಗ್ಗೆ ಪಕ್ಷದ ಹೈಕಮಾಂಡ ಬಳಿ ಮಾಹಿತಿ ಇದೆ. ಸೂಕ್ತ ಕ್ರಮಕೈಗೊಳ್ಳುತ್ತಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮೂರು ಸಲ ಎಂಎಲ್ಸಿ ಆಗಿದ್ದಾರೆ. ಪಕ್ಷದ ಕೆಲಸ ಬಂದು ಮಾಡಿಬೇಕು. ಅದನ್ನ ಬಿಟ್ಟು ಕರೆದಿಲ್ಲ ಎಂದರೇ ಹೇಗೆ. ನನ್ನ ಸಹೋದರ ಸಾಧಿಕ್ ಪೈಲ್ವಾನ್ ಸ್ಪರ್ಧೆ ಮಾಡಲು ಮುಂದಾಗ ಸಿಎಂ ಸಿದ್ದರಾಮಯ್ಯ ನಮಗೆ ಫೋನ್ ಮಾಡಿದ್ದರು. ಇದಾದ ಬಳಿಕ ಎಲ್ಲವೂ ಸರಿಯಾಗಿದೆ. ಒಂದಂತು ಸತ್ಯ ಈ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಗೆಲ್ಲುತ್ತಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂದಾನ ಸೂತ್ರಕ್ಕೆ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
