AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಶಾಸಕ ಪ್ರದೀಪ್ ಈಶ್ವರ್

ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಶಾಸಕ ಪ್ರದೀಪ್ ಈಶ್ವರ್

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 28, 2026 | 3:29 PM

Share

ದಾವಣಗೆರೆಯಲ್ಲಿ ಬಿಜೆಪಿ ಕಚೇರಿ ಎದುರು ಶಾಸಕ ಪ್ರದೀಪ್ ಈಶ್ವರ್ ಸವಾಲು ಹಾಕಿದ್ದು, ಕಾಂಗ್ರೆಸ್‌ನಲ್ಲಿ ಹೊಸ ಪೀಳಿಗೆ ಬಂದಿದೆ ಎಂದು ಗುಡುಗಿದರು. ಅಲ್ಪಸಂಖ್ಯಾತರನ್ನು ಬಿಜೆಪಿ ನಡೆಸಿಕೊಂಡ ರೀತಿ ಬಗ್ಗೆ ಟೀಕಿಸಿದ ಅವರು, ಕಾಂಗ್ರೆಸ್ ಸಮುದಾಯಕ್ಕೆ ಗೌರವ ನೀಡಿ ಸಬಲೀಕರಣಗೊಳಿಸುತ್ತಿದೆ ಎಂದರು. ಸಮರ್ಥ್ ಶಾಮನೂರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ದಾವಣಗೆರೆ, ಮಾರ್ಚ್​ 28: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ ನಾಯಕರ ಅವಹೇಳನಕಾರಿ ಭಾಷಣದ ಆರೋಪ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಶಾಸಕ ಪ್ರದೀಪ್ ಈಶ್ವರ್ ಇಂದು ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿ ಇರುವ ಕೆಬಿ ಬಡಾವಣೆಗೆ ರ್ಯಾಲಿ ಮೂಲಕ ಆಗಮಿಸಿ ಶಕ್ತಿ ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಕಚೇರಿ ಮುಂದೆನೇ ಬಂದಿದ್ದೆ ಏನು ಮಾಡಿದರು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us