ಕಾಂಗ್ರೆಸ್ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗು!
ದಾವಣಗೆರೆ ದಕ್ಷಿಣ ಉಪಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಒಳಗಿನ ಅಸಮಾಧಾನ ಈಗ ಬಂಡಾಯದ ರೂಪ ಪಡೆದಿದೆ. ದಾವಣಗೆರೆ ರಾಜಕೀಯ ಕಣ ಮತ್ತಷ್ಟು ತೀವ್ರಗೊಂಡಿದ್ದು, ಉಪಚುನಾವಣೆಯ ದಿನಾಂಕ ಹತ್ತಿರವಾಗುತ್ತಿರುವಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ, ಮಾರ್ಚ್ 25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಸಾದಿಕ್ ಪೈಲ್ವಾನ್, ‘ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಶಕ್ತಿ ಪ್ರದರ್ಶನವಾಗಬೇಕು. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಮತ್ತು ಅಹಿಂದ ಸಮುದಾಯವನ್ನು ಕಡೆಗಣಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನಾನು ಕಣಕ್ಕಿಳಿದಿದ್ದೇನೆ’ ಎಂದು ಹೇಳಿದರು. ಜನರು ಬದಲಾವಣೆ ಬಯಸುತ್ತಿದ್ದಾರೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಯಾವ ಒತ್ತಡಕ್ಕೂ ತಲೆಬಾಗುವುದಿಲ್ಲ ಎಂದು ಹೇಳಿದರು.
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ

