ದಾವಣಗೆರೆಯಲ್ಲಿ ಕಾಂಗ್ರೆಸ್​​ ಗೆಲುವಿಗೆ ಕಾರಣ ಯಾರು? ಜಬ್ಬಾರ್​ ಸ್ಫೋಟಕ ಹೇಳಿಕೆ

Edited By:

Updated on: May 06, 2026 | 5:10 PM

ಕೆ. ಅಬ್ದುಲ್ ಜಬ್ಬಾರ್ ಅವರು ಬೈ-ಎಲೆಕ್ಷನ್ ಗೆಲುವಿನ ಶ್ರೇಯಸ್ಸು ಸಲೀಂ ಅಹ್ಮದ್ ಮತ್ತು ರಿಜ್ವಾನ್ ಅರ್ಷದ್ ಅವರಿಗೆ ಸಲ್ಲುವುದನ್ನು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳ ಗ್ಯಾರಂಟಿಗಳು ಮತ್ತು ಜಮೀರ್ ಅಹ್ಮದ್ ಪಾತ್ರವನ್ನು ಎತ್ತಿ ಹಿಡಿದಿದ್ದಾರೆ. ತಮ್ಮ ಅಮಾನತು ಹಾಗೂ ನಸೀರ್ ಅಹ್ಮದ್ ಅವರ ಕೊಡುಗೆ ಕುರಿತು ಮಾತನಾಡಿದ್ದಾರೆ.

ಬೆಂಗಳೂರು, ಮೇ 06: ನಾನು ರಿಸಲ್ಟ್ ಬರುವ ಮುಂಚೆಯೇ ಕಾಂಗ್ರೆಸ್ ಗೆಲ್ಲುತ್ತದೆ ಅಂತಾ ಹೇಳಿದ್ದೆ. ಮುಖ್ಯಮಂತ್ರಿಗಳ ಐದು ಗ್ಯಾರಂಟಿ ಯೋಜನೆಗಳು ಮತ್ತು ಸಚಿವ ಜಮೀರ್ ಅಹ್ಮದ್ ಅವರ ಭೇಟಿ ಕೂಡ ಕಾಂಗ್ರೆಸ್ ಗೆಲ್ಲುವುದಕ್ಕೆ ಪ್ರಮುಖ ಕಾರಣ ಎಂದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಾರೆ. ಆ ಮೂಲಕ  ಕಾಂಗ್ರೆಸ್​ನಲ್ಲಿ ಈಗ ಕ್ರೆಡಿಟ್ ವಾರ್ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಡಬಾರದು ಅಂತ ಜನ ತೀರ್ಮಾನ ಮಾಡಿದ್ರೆ ಕೊಡಲ್ಲ. ಜಮೀರ್ ಬಂದು ಹೋದ ಕಾರಣ ಅಸಮಾಧಾನ ಸರಿ ಹೋಗಿತ್ತು ಎಂದಿದ್ದಾರೆ. ಸಿಎಂ ಜೊತೆಗೆ ನಸೀರ್ ಅಹ್ಮದ್ ಹೋಗಿ ಪ್ರಚಾರ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಹೆಂಗೋ ಗೆದ್ದಿದ್ದೇವೆ, ಈಗಾಗಲೇ ಸಿಎಂ ನೂರು ಕೋಟಿ ಕೊಟ್ಟಿದ್ದಾರೆ. ಶಾಸಕರು ದಾವಣಗೆರೆ ದಕ್ಷಿಣ ಅಭಿವೃದ್ಧಿ ಮಾಡಲಿ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More