ಅಲೆಮಾರಿ ಜನಾಂಗಕ್ಕೆ ಆಸರೆಯಾದ ಜಿಲ್ಲಾಧಿಕಾರಿ: ದಾವಣಗೆರೆ ಡಿಸಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಲೆಮಾರಿ ಸಮುದಾಯ
ಅಲೆಮಾರಿಗಳ 3 ದಶಕಗಳ ಹೋರಾಟಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪರಿಹಾರ ಮುಕ್ತಿ ನೀಡಿದ್ದಾರೆ.
ದಾವಣಗೆರೆ: ಅಲೆಮಾರಿಗಳ 3 ದಶಕಗಳ ಹೋರಾಟಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ (Shivanand Kapashi) ಮುಕ್ತಿ ನೀಡಿದ್ದಾರೆ. ಅಲೆಮಾರಿ ಜನಾಂಗಕ್ಕೆ ಜಗಳೂರು ತಾಲೂಕಿನ ಉದಗಟ್ಟದ ಗ್ರಾಮದ ಬಳಿ ಸರ್ಕಾರಿ ಜಮೀನು ನೀಡಿದ್ದಾರೆ. ಅಲೆಮಾರಿಗಳು ಜಗಳೂರಿನ ವಿವಿಧಡೆ ಗುಡಿಸಲು ಹಾಕಿಕೊಂಡು ವಾಸವಿದ್ದರು. ಸಿಂದುಳ್ಳಿ, ಸಿಳ್ಳೆಕ್ಯಾತ ಸಮುದಾಯ 38 ಕುಟುಂಬಗಳಿಗೆ ಶಾಶ್ವತ ಮನೆ ಇಲ್ಲದೇ ಪರದಾಡುತ್ತಿದ್ದರು.
ಈ ಸಂಬಂಧ ಅಲೆಮಾರಿಗಳು 3 ದಶಕಗಳಿಂದ ಹೋರಾಟ ಮಾಡುತ್ತಿದ್ದರು. ಈ ಹಿನ್ನೆಲೆ ಅಲೆಮಾರಿ ಸಮುದಾಯದ ಜಿಲ್ಲಾಧಿಕಾರಿಗಳಿಗೆ ಇದೇ ಸ್ಥಳದಲ್ಲಿ ಮನೆ ಕಟ್ಟಿಸಿಕೊಟ್ಟರೆ ನಮ್ಮ ಜೀವನಕ್ಕೆ ಅನುಕೂಲವಾಗುತ್ತೆ ಎಂದು ಮನವಿ ಮಾಡಿದ್ದರು. ಅಲೆಮಾರಿಗಳ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿಗೆ ಉದಗಟ್ಟದ ಗ್ರಾಮದ ಬಳಿಯ ಸರ್ಕಾರಿ ಜಮೀನು ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ದಿಟ್ಟ ನಿರ್ಧಾರ ಅಲೆಮಾರಿ ಜನಾಂಗಕ್ಕೆ ಆಸರೆ. ಮೂರು ದಶಕಗಳ ಬಳಿಕ ಅಲೆಮಾರಿಗಳಿಗೆ ಸಿಕ್ಕ ಶಾಶ್ವತ ಪರಿಹಾರ.
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

