AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣನ ಅಬ್ಬರಕ್ಕೆ ದಾವಣಗೆರೆಯಲ್ಲಿ ಅಲ್ಲೋಲ ಕಲ್ಲೋಲ: ಅಡಿಕೆ ತೋಟ ಸರ್ವನಾಶ

ವರುಣನ ಅಬ್ಬರಕ್ಕೆ ದಾವಣಗೆರೆಯಲ್ಲಿ ಅಲ್ಲೋಲ ಕಲ್ಲೋಲ: ಅಡಿಕೆ ತೋಟ ಸರ್ವನಾಶ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:May 17, 2026 | 11:03 AM

Share

ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ವ್ಯಾಪಕ ಅವಾಂತರ ಸೃಷ್ಟಿಸಿದೆ. ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಶಾಂತಗೌಡರ ಅಡಿಕೆ ತೋಟ ಸೇರಿ ನೂರಾರು ಅಡಿಕೆ ಮರಗಳು ನೆಲಕ್ಕುರುಳಿವೆ. ಮಳೆಗಾಳಿಗೆ ದೇವಸ್ಥಾನದ ತಗಡಿನ ಶೀಟ್‌ಗಳು ಸಹ ಹಾರಿಹೋಗಿದ್ದು, ಅಪಾರ ನಷ್ಟ ಸಂಭವಿಸಿದೆ.

ದಾವಣಗೆರೆ, ಮೇ 17: ಜಿಲ್ಲೆಯ ಹಲವೆಡೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯು ವ್ಯಾಪಕ ಅವಾಂತರಕ್ಕೆ ಕಾರಣವಾಗಿದೆ. ಬೇಸಿಗೆ ಮಳೆಯು ಆಲಿಕಲ್ಲು ಸಹಿತ ಅಪ್ಪಳಿಸಿದ್ದು, ಗಾಳಿಯ ರಭಸಕ್ಕೆ ದೇವಸ್ಥಾನದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಬಿರುಗಾಳಿ ಮತ್ತು ಮಳೆಯಿಂದ ನೂರಾರು ಅಡಿಕೆ ಮರಗಳು ನೆಲಕ್ಕುರುಳಿವೆ. ಬಸವಾಪಟ್ಟಣ ಗ್ರಾಮದ ಶಾಂತಗೌಡರು ಎಂಬುವರ ತೋಟದಲ್ಲಿ ಅರ್ಧ ಎಕರೆಯಷ್ಟು ಅಡಿಕೆ ಮರಗಳು ಬುಡ ಸಮೇತ ಕಿತ್ತು ಬಿದ್ದಿವೆ. ಹತ್ತಾರು ವರ್ಷಗಳಿಂದ ಫಲ ನೀಡುತ್ತಿದ್ದ ಅಡಿಕೆ ಮರಗಳು ನೆಲಸಮಗೊಂಡಿರುವುದು ರೈತರಿಗೆ ಆರ್ಥಿಕ ನಷ್ಟ ಉಂಟುಮಾಡಿದೆ. ಈ ಘಟನೆಯು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಮಳೆಯಿಂದ ಉಂಟಾದ ಹಾನಿಯ ಪ್ರಮಾಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 17, 2026 11:03 AM
Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More