AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravi in Yadgir: ಕೆಸಿ ನಾರಾಯಣಗೌಡ ಮತ್ತು ವಿ ಸೋಮಣ್ಣ ಬಗ್ಗೆ ಕೇಳಿದರೆ ಸಿಟಿ ರವಿ ಊಹಾಪೋಹದ ಪ್ರಶ್ನೆ ಎನ್ನುತ್ತಾರೆ!

Ravi in Yadgir: ಕೆಸಿ ನಾರಾಯಣಗೌಡ ಮತ್ತು ವಿ ಸೋಮಣ್ಣ ಬಗ್ಗೆ ಕೇಳಿದರೆ ಸಿಟಿ ರವಿ ಊಹಾಪೋಹದ ಪ್ರಶ್ನೆ ಎನ್ನುತ್ತಾರೆ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 09, 2023 | 4:22 PM

Share

ಇಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸೋಮಣ್ಣ ಮತ್ತು ನಾರಾಯಣಗೌಡರ ಬಗ್ಗೆ ಮಾತಾಡಿದ ಶಾಸಕ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಊಹಾಪೋಹದ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎನ್ನುತ್ತಾರೆ.

ಯಾದಗಿರಿ: ಕೆಸಿ ನಾರಾಯಣ ಗೌಡ (KC Narayana Gowda) ಮತ್ತು ವಿ ಸೋಮಣ್ಣ (V Somanna) ಅವರು ಪಕ್ಷ ತೊರೆಯುವ ನಿರ್ಧಾರ ಮಾಡಿರುವ ಬಗ್ಗೆ ದಿನೇದಿನೆ ಹಬ್ಬುತ್ತಿರುವ ವದಂತಿಗಳನ್ನು ಬಿಜೆಪಿ ನಾಯಕರು ಉಪೇಕ್ಷಿಸುತ್ತಿದ್ದಾರೆಯೇ? ಅಥವಾ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆಯೇ? ಯಾಕೆಂದರೆ ಒಂದೆಡೆ ಬಿಎಸ್ ಯಡಿಯೂರಪ್ಪನವರು ಹೋಗೋರನ್ನು ತಡೆಯಲಾಗುತ್ತಾ ಅನ್ನುತ್ತಾರೆ ಮತ್ತೊಂದೆಡೆ ಇಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮಾತಾಡಿದ ಶಾಸಕ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ (CT Ravi), ಊಹಾಪೋಹದ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎನ್ನುತ್ತಾರೆ. ಬೆಂಕಿಯಿಲ್ಲದೆ ಹೊಗೆಯಾಡುತ್ತಾ ಮಾರಾಯ್ರೇ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 09, 2023 04:22 PM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.