ಪತ್ನಿ ಸಮೇತ ಹಾಸನಾಂಬೆ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್​

Updated on: Oct 14, 2025 | 11:10 PM

ಡಿಸಿಎಂ ಡಿಕೆ ಶಿವಕುಮಾರ್ ಪತ್ನಿ ಸಮೇತ ಹಾಸನಾಂಬೆ ದರ್ಶನ ಪಡೆದರು. ಸಂಕಲ್ಪದ ವೇಳೆ ಶತ್ರುಗಳ ಮೇಲೆ ವಿಜಯ ಸಾಧಿಸಲು ಖಡ್ಗಮಾಲಾ ಸ್ತೋತ್ರ ಪಠಿಸಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಹಾಸನಾಂಬೆ ದುರ್ಗೆಯ ಸ್ವರೂಪಿ ಎಂದು ಬಣ್ಣಿಸಿದ ಅವರು, ಜಿಲ್ಲಾಡಳಿತದ ಉತ್ತಮ ಸಿದ್ಧತೆಗಳನ್ನು ಶ್ಲಾಘಿಸಿದರು. ಪ್ರತಿ ವರ್ಷ ಕುಟುಂಬದೊಂದಿಗೆ ದರ್ಶನ ಪಡೆಯುವ ಭಾಗ್ಯ ತಮ್ಮದೆಂದು ತಿಳಿಸಿದರು.

ಹಾಸನ, ಅಕ್ಟೋಬರ್ 14: ಡಿಸಿಎಂ ಡಿಕೆ ಶಿವಕುಮಾರ್​​ ಪತ್ನಿ ಸಮೇತ ಹಾಸನಾಂಬೆ ದರ್ಶನ ಪಡೆದರು. ಈ ವೇಳೆ ಶತ್ರುವಿನ ಮೇಲೆ ವಿಜಯ ಸಾಧಿಸಲು ಖಡ್ಗಮಾಲಾ ಸ್ತೋತ್ರದ ಪಠಣೆ ಮೂಲಕ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೇನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

 

Published on: Oct 14, 2025 11:09 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More