ಪತ್ನಿ ಸಮೇತ ಹಾಸನಾಂಬೆ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ ಪತ್ನಿ ಸಮೇತ ಹಾಸನಾಂಬೆ ದರ್ಶನ ಪಡೆದರು. ಸಂಕಲ್ಪದ ವೇಳೆ ಶತ್ರುಗಳ ಮೇಲೆ ವಿಜಯ ಸಾಧಿಸಲು ಖಡ್ಗಮಾಲಾ ಸ್ತೋತ್ರ ಪಠಿಸಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಹಾಸನಾಂಬೆ ದುರ್ಗೆಯ ಸ್ವರೂಪಿ ಎಂದು ಬಣ್ಣಿಸಿದ ಅವರು, ಜಿಲ್ಲಾಡಳಿತದ ಉತ್ತಮ ಸಿದ್ಧತೆಗಳನ್ನು ಶ್ಲಾಘಿಸಿದರು. ಪ್ರತಿ ವರ್ಷ ಕುಟುಂಬದೊಂದಿಗೆ ದರ್ಶನ ಪಡೆಯುವ ಭಾಗ್ಯ ತಮ್ಮದೆಂದು ತಿಳಿಸಿದರು.
ಹಾಸನ, ಅಕ್ಟೋಬರ್ 14: ಡಿಸಿಎಂ ಡಿಕೆ ಶಿವಕುಮಾರ್ ಪತ್ನಿ ಸಮೇತ ಹಾಸನಾಂಬೆ ದರ್ಶನ ಪಡೆದರು. ಈ ವೇಳೆ ಶತ್ರುವಿನ ಮೇಲೆ ವಿಜಯ ಸಾಧಿಸಲು ಖಡ್ಗಮಾಲಾ ಸ್ತೋತ್ರದ ಪಠಣೆ ಮೂಲಕ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೇನೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 14, 2025 11:09 PM
