ದೆಹಲಿಯಲ್ಲಿ ಶಿವಕುಮಾರ್ ಮತ್ತು ಜೆಡಿಎಸ್ ಮುಖಂಡರು ನಡೆಸಿದ ಗುಸುಗುಸು ಮಾತುಕತೆ ಚರ್ಚೆಗೆ ಗ್ರಾಸ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 07, 2025 | 1:50 PM

ಮತ್ತೊಂದು ಭಾಗದಲ್ಲೂ ಶಿವಕುಮಾರ್, ಮಹೇಶ್ ಮತ್ತು ಕಾಶೆಂಪುರ ಗಹನವಾದ ಚರ್ಚೆಯಲ್ಲಿ ಮುಳುಗಿರುವುದನ್ನು ಇಲ್ಲಿ ನೋಡಬಹುದು. ಪತ್ರಕರ್ತರು ಅವರ ಹತ್ತಿರ ಬಂದಿರೋದನ್ನು ಗಮನಿಸುವ ಶಿವಕುಮಾರ್ ಹೋಗ್ರೀ ಆಚೆ ಎನ್ನುವಂತೆ ಸನ್ನೆ ಮಾಡುತ್ತಾರೆ. ಈ ಮೂವರ ನಡುವೆ ನಡೆದಿರಬಹುದಾದ ಮಾತುಕತೆಯ ಬಗ್ಗೆ ಸಹಜವಾಗೇ ಕುತೂಹಲ ಸೃಷ್ಟಿಯಾಗಿದೆ.

ದೆಹಲಿ: ಸದ್ಯಕ್ಕೆ ದೆಹಲಿಯಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಡಿಕೆ ಶಿವಕುಮಾರ್ ಅವರನ್ನು ಜೆಡಿಎಸ್ ಮುಖಂಡರಾದ ಸಾ ರಾ ಮಹೇಶ್ ಮತ್ತು ಬಂಡೆಪ್ಪ ಕಾಶೆಂಪುರ ಭೇಟಿಯಾಗಿರುವುದು ಅಥವಾ ಖುದ್ದು ಡಿಸಿಎಂ ಆ ನಾಯಕರನ್ನು ಭೇಟಿಯಾಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಮೂವರು ಒಟ್ಟಿಗೆ ನಿಂತಿರುವುದನ್ನು ಮಾಧ್ಯಮ ಕೆಮೆರಾಗಳು ಸೆರೆಹಿಡಿಯುವಾಗ ಶಿವಕುಮಾರ್ ಸಿಡಿಸಿದ ಜೋಕ್ ಗೆ ಜೆಡಿಎಸ್ ಮುಖಂಡರು ನಗುತ್ತಾರೆ. ನಂತರ ಶಿವಕುಮಾರ್ ನಮ್ಮ ಪೋಟೋ ತೆಗೆದಿದ್ದು ಆಯ್ತಲ್ಲ, ಹೊರಡಿ ಇನ್ನು ಅಂತ ಮಾಧ್ಯಮದವರಿಗೆ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದೆಹಲಿ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ಕೇವಲ ಶಿವಕುಮಾರ್​​ರನ್ನು ಮಾತ್ರ ಚರ್ಚೆಗೆ ಕರೆದಿದ್ದು ಯಾಕೆ?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.