AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಡಿಸಿಎಂ ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಡಿಸಿಎಂ ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 22, 2025 | 12:12 PM

Share

ಈಡಿ ಅಧಿಕಾರಿಗಳು ಜಿ ಪರಮೇಶ್ವರ್ ಸ್ವಾಮ್ಯದ ಸಿದ್ಧಾರ್ಥ ಮೆಡಿಕಲ್ ಕಾಲೇಜು, ಶ್ರೀ ಸಿದ್ಧಾರ್ಥ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಟಿ ಬೇಗೂರಿನಲ್ಲಿರುವ ಅವರ ಮತ್ತೊಂದು ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ. ಏತನ್ಮಧ್ಯೆ, ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪರಮೇಶ್ವರ್, ಜಾರಿಗೆ ನಿರ್ದೇಶನಾಲಯದ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರು, ಮೇ 22: ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ್ದು ಕಾಗದ ಪತ್ರಗಳು ಮತ್ತು ಹಣದ ವಹಿವಾಟಿನ ಪರಿಶೀಲನೆ 24 ಗಂಟೆ ಕಳೆದರೂ ನಡೆಯುತ್ತಿದೆ. ಇದೇ ಹಿನ್ನೆಲೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಲೋಕೋಪಯೋಗಿ ಖಾತೆ ಸಚಿವ ಸತೀಶ್​ ಜಾರಕಿಹೊಳಿ ಇಂದು ಬೆಳಗ್ಗೆ ಪರಮೇಶ್ವರ್ ನಿವಾಸಕ್ಕೆ ತೆರಳಿ ಅವರೊಂದಿಗೆ ಮಾತಾಡಿದರು. ಮೊದಲು ಶಿವಕುಮಾರ್ ನಂತರ ಸತೀಶ್ ಜಾರಕಿಹೊಳಿ ಕಾರಲ್ಲಿ ಆಗಮಿಸುವುದನ್ನು ಗಮನಿಸಬಹುದು.

ಇದನ್ನೂ ಓದಿ:   ರನ್ಯಾ ರಾವ್ ಖಾತೆಗೆ 40 ಲಕ್ಷ ರೂ. ವರ್ಗಾವಣೆ ಆರೋಪ: ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮುಂದುವರಿದ ಇಡಿ ಶೋಧ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.