ದೆಹಲಿಯಲ್ಲೇ ಉಳಿದು ಜಲಸಂಪನ್ಮೂಲ ಅಧಿಕಾರಿಗಳೊದಿಗೆ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದರೆ, ಶಿವಕುಮಾರ್ ಜಲಸಂಪನ್ಮೂಲ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.
ದೆಹಲಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ಭೇಟಿ ನೀಡಿದಾಗೆಲ್ಲ ಬಹಳ ಬ್ಯೂಸಿಯಾಗಿರುತ್ತಾರೆ ಅನ್ನೋದು ನಿರ್ವಿವಾದಿತ. ಪ್ರವಾಸದ ಪ್ರತಿನಿಮಿಷವನ್ನು ಪ್ರಯೋಜನಪಡಿಸಿಕೊಳ್ಳುವ ತವಕದಲ್ಲಿದ್ದಾರೆ. ನಿನ್ನೆ ಪಕ್ಷದ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿದ ಬಳಿಕ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಲ್ಲೇ ಉಳಿದಿದ್ದಾರೆ. ಸಿದ್ದರಾಮಯ್ಯ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಭೇಟಿಯಾಗಲಿದ್ದಾರೆ. ಅತ್ತ ಶಿವಕುಮಾರ್ ರಾಜ್ಯದ ಜಲಸಂಪನ್ಮೂಲ ಅಧಿಕಾರಿಗಳೊಂದಿಗೆ ಕೇಂದ್ರ ಜಲಸಂಪನ್ಮೂಲ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನೀರಿಗೆ ಸಂಬಂಧಿಸಿದಂತೆ ನೆರೆರಾಜ್ಯಗಳೊಂದಿಗೆ ಕರ್ನಾಟಕದ ಹಲವು ತಗಾದೆಗಳಿವೆ. ಅವುಗಳನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳುವ ಪ್ರಯತ್ನ ಶಿವಕುಮಾರ್ ಮಾಡುತ್ತಿದ್ದಾರೆ. ಅವರೊಂದಿಗೆ ಜಲಸಮಸ್ಯೆಗಳಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲ ಮೋಹನ್ ಕಾತರಕಿ, ಅಧಿಕಾರಿಗಳಾದ ತುಷಾರ ಗಿರಿನಾಥ್, ರಾಕೇಶ್ ಸಿಂಗ್ ಮೊದಲಾದವರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
