ದೆಹಲಿಯಲ್ಲೇ ಉಳಿದು ಜಲಸಂಪನ್ಮೂಲ ಅಧಿಕಾರಿಗಳೊದಿಗೆ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 03, 2023 | 12:26 PM

ಸಿದ್ದರಾಮಯ್ಯ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದರೆ, ಶಿವಕುಮಾರ್ ಜಲಸಂಪನ್ಮೂಲ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ದೆಹಲಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ಭೇಟಿ ನೀಡಿದಾಗೆಲ್ಲ ಬಹಳ ಬ್ಯೂಸಿಯಾಗಿರುತ್ತಾರೆ ಅನ್ನೋದು ನಿರ್ವಿವಾದಿತ. ಪ್ರವಾಸದ ಪ್ರತಿನಿಮಿಷವನ್ನು ಪ್ರಯೋಜನಪಡಿಸಿಕೊಳ್ಳುವ ತವಕದಲ್ಲಿದ್ದಾರೆ. ನಿನ್ನೆ ಪಕ್ಷದ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿದ ಬಳಿಕ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಲ್ಲೇ ಉಳಿದಿದ್ದಾರೆ. ಸಿದ್ದರಾಮಯ್ಯ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಭೇಟಿಯಾಗಲಿದ್ದಾರೆ. ಅತ್ತ ಶಿವಕುಮಾರ್ ರಾಜ್ಯದ ಜಲಸಂಪನ್ಮೂಲ ಅಧಿಕಾರಿಗಳೊಂದಿಗೆ ಕೇಂದ್ರ ಜಲಸಂಪನ್ಮೂಲ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನೀರಿಗೆ ಸಂಬಂಧಿಸಿದಂತೆ ನೆರೆರಾಜ್ಯಗಳೊಂದಿಗೆ ಕರ್ನಾಟಕದ ಹಲವು ತಗಾದೆಗಳಿವೆ. ಅವುಗಳನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳುವ ಪ್ರಯತ್ನ ಶಿವಕುಮಾರ್ ಮಾಡುತ್ತಿದ್ದಾರೆ. ಅವರೊಂದಿಗೆ ಜಲಸಮಸ್ಯೆಗಳಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲ ಮೋಹನ್ ಕಾತರಕಿ, ಅಧಿಕಾರಿಗಳಾದ ತುಷಾರ ಗಿರಿನಾಥ್, ರಾಕೇಶ್ ಸಿಂಗ್ ಮೊದಲಾದವರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.