ಗಾಗಲ್ ಹಾಕಿ ಡಿಸಿಎಂ‌ ಡಿಕೆ ಶಿವಕುಮಾರ್​ ಜಾಲಿ ಬೋಟ್ ರೈಡ್!

Edited By:

Updated on: Feb 02, 2025 | 7:51 PM

ಡಿಸಿಎಂ ಡಿಕೆ ಶಿವಕುಮಾರ್ ರವರು ರಾಮನಗರದ ಕಣ್ವ ಜಲಾಶಯಕ್ಕೆ ಭೇಟಿ ನೀಡಿ, ದೋಣಿ ಸವಾರಿ ಮಾಡಿದರು. ಶಾಸಕ ಸಿ.ಪಿ.ಯೋಗೇಶ್ವರ್ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಅವರೊಂದಿಗೆ ಅವರು ಆನಂದಿಸಿದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.

ರಾಮನಗರ, ಫೆಬ್ರವರಿ 02: ಕೃತಜ್ಞತಾ ಸಮಾವೇಶದ ಬಳಿಕ ಚನ್ನಪಟ್ಟಣ ಕಣ್ವಜಲಾಶಯ ವೀಕ್ಷಣೆ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಕಣ್ಣಿಗೆ ಗಾಗಲ್ ಹಾಕಿ, ಬೋಟ್​ನಲ್ಲಿ ಫುಲ್ ಮಿಂಚಿದ್ದಾರೆ. ಡಿಕೆ ಶಿವಕುಮಾರ್ ಜತೆ ಶಾಸಕ ಸಿಪಿ ಯೋಗೇಶ್ವರ್ ಪಂಚೆಯಲ್ಲಿಯೇ ರೈಡ್ ಮಾಡಿದ್ದಾರೆ. ಮಾಜಿ ಸಂಸದ ಡಿಕೆ ಸುರೇಶ್ ಕೂಡ ಬೋಟ್ ರೈಡ್ ಮಾಡಿದ್ದಾರೆ. ಪ್ರವಾಸೋದ್ಯಮ ಹೆಚ್ಚಿಸುವ ನಿಟ್ಟಿನಲ್ಲಿ ಅನೇಕ ಯೋಜನೆ ಜಾರಿ ಮಾಡಲಾಗುತ್ತಿದೆ. ಹೀಗಾಗಿ ಡ್ಯಾಂ ಪರಿಶೀಲನೆ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More