AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅದೇನು ಹೇಳಿದರು ಅಂತ ಡಿಕೆ ಶಿವಕುಮಾರ್ ನಕ್ಕರು?

ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅದೇನು ಹೇಳಿದರು ಅಂತ ಡಿಕೆ ಶಿವಕುಮಾರ್ ನಕ್ಕರು?

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 02, 2023 | 2:25 PM

Share

ಸಿದ್ದರಾಮಯ್ಯ ಹೊರಡಲು ಅಣಿಯಾದಾಗ ಶಿವಕುಮಾರ್ ಕಾರ್ಯಕರ್ತರಿಗೆ ಏನೂ ಹೇಳಲೇ ಇಲ್ಲವಲ್ಲ ಅನ್ನುತ್ತಾ ಅವರು ಕೈ ಹಿಡಿದು ಕೂರಿಸಲು ಪ್ರಯತ್ನಿಸುತ್ತಾರೆ. ಅದಕ್ಕೆ ಸಿದ್ದರಾಮಯ್ಯ ನೀವು ಅಧ್ಯಕ್ಷರಾಗಿದ್ದೀರಿ, ನೀವೇ ಹೇಳಬೇಕು ಅಂದಾಗ ಇಬ್ಬರೂ ನಗುತ್ತಾರೆ. ನಂತರ ಇಬ್ಬರ ನಡುವೆ ಆತ್ಮೀಯವಾಗಿ ಒಂದಷ್ಟು ಮಾತುಕತೆ ನಡೆದ ಮೇಲೆ ಸಿದ್ದರಾಮಯ್ಯ ಅಲ್ಲಿಂದ ಹೊರಡುತ್ತಾರೆ.

ಬೆಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧಿ (Mahatma Gandhi) ಮತ್ತು ಭಾರತದ ಪ್ರಧಾನ ಮಂತ್ರಿಯಾಗಿದ್ದ ಲಾಲ್ ಬಹಾದೂರ್ ಶಾಸ್ತ್ರಿ  (Lal Bahadur Shastri) ಅವರ ಜನ್ಮ ವಾರ್ಷಿಕೋತ್ಸವಗಳ ಅಂಗವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ನಾಯಕರಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar), ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಂಸದ ಡಿಕೆ ಸುರೇಶ್ ಮೊದಲಾದವರೊಂದಿಗೆ ಸಚಿವರು, ಶಾಸಕರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ; ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದೂರ್ ಶಾಸ್ತ್ರಿ ಅವರಿಗೆ ಸಚಿವ ಸಂಪುಟ ಮತ್ತು ಎಲ್ಲ ಕಾರ್ಯಕರ್ತರ ಪರವಾಗಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವುದಾಗಿ ಹೇಳಿ ಹೊರಡಲು ಅಣಿಯಾದಾಗ ಶಿವಕುಮಾರ್ ಕಾರ್ಯಕರ್ತರಿಗೆ ಏನೂ ಹೇಳಲೇ ಇಲ್ಲವಲ್ಲ ಅನ್ನುತ್ತಾ ಅವರು ಕೈ ಹಿಡಿದು ಕೂರಿಸಲು ಪ್ರಯತ್ನಿಸುತ್ತಾರೆ. ಅದಕ್ಕೆ ಸಿದ್ದರಾಮಯ್ಯ ನೀವು ಅಧ್ಯಕ್ಷರಾಗಿದ್ದೀರಿ, ನೀವೇ ಹೇಳಬೇಕು ಅಂದಾಗ ಇಬ್ಬರೂ ನಗುತ್ತಾರೆ. ನಂತರ ಇಬ್ಬರ ನಡುವೆ ಆತ್ಮೀಯವಾಗಿ ಒಂದಷ್ಟು ಮಾತುಕತೆ ನಡೆದ ಮೇಲೆ ಸಿದ್ದರಾಮಯ್ಯ ಅಲ್ಲಿಂದ ಹೊರಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.