Bengaluru News: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್​

|

Updated on: Jun 23, 2023 | 10:12 PM

ನಗರದ ರೇಸ್​ಕೋರ್ಸ್​ ರಸ್ತೆಯ ನಿವಾಸದಲ್ಲಿ ಇಂದು(ಜೂ.23) ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ಡಿಸಿಎಂ ಡಿಕೆ ಶಿವಕುಮಾರ್​ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಮೂಡಿಸಿದೆ.

ಬೆಂಗಳೂರು: ನಗರದ ರೇಸ್​ಕೋರ್ಸ್​ ರಸ್ತೆಯ ನಿವಾಸದಲ್ಲಿ ಇಂದು(ಜೂ.23) ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಯವರನ್ನ ಡಿಸಿಎಂ ಡಿಕೆ ಶಿವಕುಮಾರ್(D. K Shivakumar)​ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಮೂಡಿಸಿದೆ. ಇನ್ನು ಮನೆಗೆ ಬಂದ ಡಿಕೆ ಶಿವಕುಮಾರ್​ಗೆ ಬೊಮ್ಮಾಯಿಯವರು​ ಹೂ ಗುಚ್ಛ ನೀಡಿ ಸ್ವಾಗತಿಸಿದರು. ಇದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್​ ಕೂಡ ಬೊಮ್ಮಾಯಿಯವರಿಗೂ ಶಾಲು ಹೊದಿಸಿ, ಹೂ ಗುಚ್ಛ ನೀಡಿ ಧನ್ಯವಾದ ತಿಳಿಸಿದರು. ಇನ್ನು ಈ ಹಿಂದೆ ಸಿಎಂ ಆಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಬಸವರಾಜ್ ಬೊಮ್ಮಾಯಿಯುವರಿಂದ ಬ್ರಾಂಡ್ ಬೆಂಗಳೂರು ಸಂಬಂಧ ಸಲಹೆಗಳನ್ನು ಪಡೆಯುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on