ಆರ್​ಆರ್ ನಗರ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ದೇವಸ್ಥಾನದ ಜಾಗಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 30, 2024 | 5:56 PM

ಒತ್ತುವರಿ ಪೀಡೆ ಬೆಂಗಳೂರು ನಗರಕ್ಕೆ ಹೊಸದೇನೂ ಅಲ್ಲ, ದೇವಸ್ಥಾನ, ಆಶ್ರಮ, ಪಾರ್ಕ್ ಮತ್ತು ಇತರ ಸಾರ್ವಜನಿಕ ಉಪಯೋಗಕ್ಕೆ ಬರುವ ಸ್ಥಳಗಳನ್ನು ಅವ್ಯಾಹತವಾಗಿ ಒತ್ತುವರಿ ಮಾಡಿಕೊಳ್ಳುವ ಕಾನೂನುಬಾಹಿರ ಕೆಲಸ ಜಾರಿಯಲ್ಲಿದೆ. ಜನ ರಾಜಾಕಾಲುವೆಗಳನ್ನೂ ಬಿಡುತ್ತಿಲ್ಲ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಒತ್ತುವರಿಗಳನ್ನು ತೆರವು ಮಾಡಿಸುವ ಕಾರ್ಯಕ್ಕೆ ಮುಂದಾಗಬೇಕು.

ಬೆಂಗಳೂರು: ವಿಧಾನಸಭಾ ಕ್ಷೇತ್ರ ರಾಜರಾಜೇಶ್ವರಿ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗೆವಡೇರಹಳ್ಳಿಯಲ್ಲಿ ಕರುಮಾರಿಯಮ್ಮ ದೇವಸ್ಥಾನಕ್ಕೆ ಸೇರಿದ ಜಮೀನಲ್ಲಿ ಒತ್ತುವರಿಯಾಗಿದ್ದು ಅದನ್ನು ಪರಿಶೀಲಿಸಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಬಂಧಪಟ್ಟ ಅಧಿಕಾರಿಗಳೊಡನೆ ಸ್ಥಳಕ್ಕೆ ಭೇಟಿ ನೀಡಿದರು. ಕರುಮಾರಿಯಮ್ಮ ದೇವಸ್ಥಾನದ ಟ್ರಸ್ಟ್​ಗೆ 1.24 ಎಕರೆ ಜಮೀನು ಸರ್ಕಾರದಿಂದ ಮಂಜೂರಾಗಿದ್ದು ಅದರ ವಿವರಗಳನ್ನು ಜಿಲ್ಲಾಧಿಕಾರಿ ಜಿ ಜಗದೀಶ್ ಉಪ ಮುಖ್ಯಮಂತ್ರಿಗೆ ನೀಡಿದರು. ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಿವಕಮಾರ್ ಅಧಿಕಾರಿಗಳಿಗೆ ಆದೇಶ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗಾಂಧಿ ಭಾರತ: ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.