ಚಾಮುಂಡಿ ಬೆಟ್ಟ ಸರ್ಕಾರದ ಆಸ್ತಿ ಅಂತ ಮತ್ತೊಮ್ಮೆ ಹೇಳಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

Updated on: Aug 27, 2025 | 1:57 PM

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅನ್ಯರು ಯಾರೂ ಚಾಮುಂಡಿ ಬೆಟ್ಟಕ್ಕೆ ಬರಬಾರದು, ಬೇರೆಯವರನ್ನು ಬೆಟ್ಟ ಹತ್ತಲು ಬಿಡಬಾರದು ಅನ್ನುತ್ತಾರೆ, ಅವರು ಹೇಳಿದಂತೆ ನಡೆಯುವುದು ಸಾಧ್ಯವೇ ಎಂದ ಡಿಸಿಎಂ ಶಿವಕುಮಾರ್, ಇವತ್ತು ವಿನಾಯಕ ಚತುರ್ಥಿಯಾಗಿರುವುದರಿಂದ ನಮ್ಮೂರಲ್ಲಿ ನಮ್ಮ ಗುರು ಹಿರಿಯರಿಗೆ ಮತ್ತು ಪೂರ್ವಿಕರಿಗೆ ಪೂಜೆಯನ್ನು ಇಟ್ಟುಕೊಂಡಿದ್ದೇವೆ ಅದೇ ನಿಮಿತ್ತವಾಗಿ ಊರಿಗೆ ಹೋಗುತ್ತಿದ್ದೇನೆ ಎಂದರು.

ಬೆಂಗಳೂರು, ಆಗಸ್ಟ್ 27: ಚಾಮುಂಡಿಬೆಟ್ಟ ಸರ್ಕಾರದ ಆಸ್ತಿ ಅಂತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುನರುಚ್ಛರಿಸಿದರು. ಮಾಧ್ಯಮಗಳೊಂದಿಗೆ ಮಾತಾಡಿದ ಅವರು ದಸರಾ ಹಬ್ಬವನ್ನು ನಾಡಹಬ್ಬವೆಂದು ಆಚರಿಸುತ್ತೇವೆ, ಹಿಂದಿನ ಮಹಾರಾಜರು ಮತ್ತು ಸರ್ಕಾರ ಜೊತೆಗೂಡಿ ತೆಗೆದುಕೊಂಡ ನಿರ್ಣಯ ಅದು, ಚಾಮುಂಡಿ ತಾಯಿ (goddess Chamundeshwari) ನಾಡಿನ ಎಲ್ಲ ಜನರನ್ನು ಆಶೀರ್ವದಿಸುತ್ತಾಳೆ, ದಸರಾ ಉತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು, ಧಾರ್ಮಿಕ ಆಚರಣೆಗಳು ಅವರವರ ನಂಬಿಕೆ, ಶ್ರದ್ಧೆಗಳಿಗೆ ಬಿಟ್ಟ ವಿಚಾರ ಎಂದು ಶಿವಕುಮಾರ್ ಹೇಳಿದರು. ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ವಿದೇಶಿಯರು ಕೂಡ ಬರುತ್ತಾರೆ, ಅವರೆಲ್ಲ ಯಾವ ಧರ್ಮದವರು? ಎಂದು ಶಿವಕುಮಾರ್ ಪ್ರಶ್ನಿಸುತ್ತಾರೆ.

ಇದನ್ನೂ ಓದಿ:   ಶಿವಕುಮಾರ್​ಗೆ ಒಬ್ಬ ಕಾಂಗ್ರೆಸ್ಸಿಗನಾಗಿ ತಮ್ಮ ತಪ್ಪಿನ ಅರಿವಾಗಿದ್ದರೆ ಬಹಳ ಸಂತೋಷ: ಬಿಕೆ ಹರಿಪ್ರಸಾದ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More